ರಿಷಿ ನಿಧನಕ್ಕೆ ಕ್ರೀಡಾ ಪಟುಗಳ ಕಂಬನಿ
ನವದೆಹಲಿ, ಏ.30, ಹಿರಿಯ ನಟ ರಿಷಿ ಕಪೂರ್ ನಿಧನಕ್ಕೆ ಚಿತ್ರ ರಂಗ ಹಾಗೂ ಗಣ್ಯಾತಿ ಗಣ್ಯರು ಕಂಬನಿ ಮಿಡಿದಿದ್ದಾರೆ. ಭಾರತದ ಖ್ಯಾತ ನಾಮ ಕ್ರೀಡಾ ಪಟುಗಳು ಸಹ ರಿಷಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.“ನಿನ್ನೆ ಇರ್ಫಾನ್ ಖಾನ್, ಇಂದು ರಿಷಿ ಕಪೂರ್ ನಿಧನ. ಈ ಸುದ್ದಿ ಕೇಳಲೇ ತುಂಬ ನೋವಾಗುತ್ತಿದೆ. ರಿಷಿ ಅವರ ಆತ್ಮಕ್ಕೆ ಭಗಂವತ ಶಾಂತಿ ನೀಡಲಿ, ಕುಟಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ” ಎಂದು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದಾರೆ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸಹ ರಿಷಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ನಾನು ಅವರ ಚಿತ್ರವನ್ನು ನೋಡುತ್ತಲೆ ಬೆಳೆದಿದ್ದೇನೆ” ಎಂದು ಅವರು ರಿಷಿ ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ. ಬಾಕ್ಸರ್ ವಿಜೇಂದ್ರ ಸಿಂಗ್, ಮಾಜಿ ಟೆನಿಸ್ ಆಟಗಾರ ಮಹೇಶ್ ಭೂಪತಿ, ಸಾನಿಯಾ ಮಿರ್ಜಾ, ಬ್ಯಾಡ್ಮಿಂಟನ್ ಆಟಗಾರ ಸೈನಾ ನೆಹ್ವಾಲ್, ಟರ್ಬನೇಟರ್ ಹರ್ಭಜನ್ ಸಿಂಗ್, ಕುಸ್ತಿ ಪಟುಗಳಾದ ಸಾಕ್ಷಿ ಮಲೀಕ್, ಸುಶೀಲ್ ಕುಮಾರ್, ಗೀತಾ ಪೋಗಟ್ ಅವರು ಸಹ ಸಂತಾಪ ಸೂಚಿಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 