ಗೌರಿ ಲಂಕೇಶ್ ಹತ್ಯೆ ಆರೋಪಿ ರಿಷಿಕೇಶ್ ಇಂದು ಬೆಂಗಳೂರಿಗೆ
ಬೆಂಗಳೂರು, ಜ. 12 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಬಂಧಿತವಾಗಿದ್ದ ರಿಷಿಕೇಶ್ ದೇವ್ಡೇಕರ್ ಅಲಿಯಾಸ್ ಮುರಳಿಯನ್ನು ಇಂದು ಎಸ್ ಐಟಿ ತಂಡ ಬೆಂಗಳೂರಿಗೆ ಕರೆತರಲಿದೆ.
ಇದೇ ತಿಂಗಳು 9ರಂದು ಎಸ್ಐಟಿ ತಂಡ ಜಾರ್ಖಂಡ್ ನಲ್ಲಿ ರಿಷಿಕೇಶ್ ನನ್ನು ಬಂಧಿಸಿ, ಜಾರ್ಖಂಡ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಆತನನ್ನು ವಶಕ್ಕೆ ಪಡೆದಿದೆ.
ಜಾರ್ಖಂಡ್ ನಿಂದ ರೈಲಿನ ಮೂಲಕ ರಿಷಿಕೇಶ್ ನನ್ನು ಅಧಿಕಾರಿಗಳು ಬೆಂಗಳೂರಿಗೆ ಕರೆತರುತ್ತಿದ್ದು, ಸುಮಾರು 36 ಗಂಟೆಗಳ ಬಳಿಕ ಇಂದು ಸಂಜೆ ಬೆಂಗಳೂರಿಗೆ ತಲುಪಲಿದ್ದಾರೆ.
ನಂತರ ಆರೋಪಿಯನ್ನು ಎಸ್ ಐಟಿ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ವಶಕ್ಕೆ ಪಡೆಯಲಿದ್ದಾರೆ.
ರಿಷಿಕೇಶ್ ಜಾರ್ಖಂಡ್ ನ ಧನ್ಬಾದ್ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದ್ದು, ಆತ ಸುಮಾರು 1 ವರ್ಷದಿಂದ ಕುಟುಂಬದವರ ಸಂಪರ್ಕದಿಂದ ದೂರವಿದ್ದ ಎಂಬ ಮಾಹಿತಿ ಅಧಿಕಾರಿಗಳಿಗೆ ಲಭ್ಯವಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 