ನದಿಗಳ ನೀರಿನ ಮಟ್ಟದಲ್ಲಿ ಏರಿಕೆ: ಸೇತುವೆಗಳು ಜಲಾವೃತ
Rising river water levels: Bridges flooded
ಚಿಕ್ಕೋಡಿ 27: ನೆರೆಯ ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದಿರುವ ಪರಿಣಾಮ ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಕೃಷ್ಣಾ ಮತ್ತು ದೂಧಗಂಗ ನದಿ ಮೂಲಕ 50 ಸಾವಿರ ಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ಕೃಷ್ಣಾ, ದೂದಗಂಗಾ ಮತ್ತು ವೇಧಗಂಗಾ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬಂದಿದೆ. ಚಿಕ್ಕೋಡಿ ಉಪವಿಭಾಗದ ಆರು ಸೇತುವೆಗಳು ಜಲಾವೃತಗೊಂಡಿವೆ.
ಕಳೆದ ಎರಡು ದಿನಗಳಿಂದ ನೆರೆಯ ಮಹಾರಾಷ್ಟ್ರದ ಕೋಯ್ನಾ, ಮಹಾಬಳೇಶ್ವರ, ರಾಧಾನಗರಿ ಮತ್ತು ಪಾಟಗಾಂವ ಹಾಗೂ ಕೊಲ್ಲಾಪೂರ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಇದರಿಂದ ರಾಜ್ಯದ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರಲಾರಂಭಿಸಿದೆ.
ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ 23 ಸಾವಿರ ಕ್ಯೂಸೆಕ್, ಧೂಮ್ 7200 ಕ್ಯೂಸೆಕ್, ಕಣೇರ-4200 ಕ್ಯೂಸೆಕ್, ತಾರಲಿ-4400 ಕ್ಯೂಸೆಕ್, ವೀರ್ 14 ಸಾವಿರ ಕ್ಯೂಸೆಕ್ ನೀರು ಹರಿದು ಬರಲಾರಂಭಿಸಿದೆ. ಜಲಾಶಯಗಳಿಂದ ಅಪಾರ ಪ್ರಮಾಣದ ನೀರು ಹರಿದು ಬರುವುದರಿಂದ ಕೃಷ್ಣಾ, ದೂಧಗಂಗಾ ಮತ್ತು ವೇಧಗಂಗಾ ನದಿಯ ನದಿಯ ಕೆಳ ಹಂತದ ಸೇತುವೆಗಳು ಮುಳುಗಡೆಗೊಂಡು ಸಂಚಾರ ಕಡಿತಗೊಂಡಿವೆ.
ಆರು ಸೇತುವೆ ಜಲಾವೃತ: ಕೃಷ್ಣಾ ನದಿಯ ಕಲ್ಲೋಳ-ಯಡೂರ, ಮಾಂಜರಿ-ಬಾ.ಸವದತ್ತಿ, ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ, ಕಾರದಗಾ-ಭೋಜ, ವೇಧಗಂಗಾ ನದಿಯ ಬಾರವಾಡ-ಕುನ್ನೂರ, ಭೋಜವಾಡಿ-ಶಿವಾಪೂರವಾಡಿ ಸೇತುವೆ ಜಲಾವೃತಗೊಂಡು ಸಂಚಾರ ಕಡಿತಗೊಂಡಿವೆ.
ನೆರೆಯ ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ ಮೂಲಕ 82 ಸಾವಿರ ಕ್ಯೂಸೆಕ್ ನೀರು ಹರಿದು ಬಂದರೆ ದೂಧಗಂಗಾ ಮತ್ತು ವೇಧಗಂಗಾ ನದಿಯ ಮೂಲಕ 15 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇದರಿಂದ ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ 97 ಸಾವಿರ ಕ್ಯೂಸೆಕ್ ನೀರು ಹರಿದು ಆಲಮಟ್ಟಿ ಜಲಾಶಯಕ್ಕೆ ಹೋಗುತ್ತದೆ.
ಮಳೆ ವಿವರ- ಕೋಯ್ನಾ-112 ಮಿಮೀ, ನವಜಾ-152 ಮಿಮೀ, ಮಹಾಬಳೇಶ್ವರ-202 ಮಿಮೀ ಮತ್ತು ಚಿಕ್ಕೋಡಿ ಭಾಗದಲ್ಲಿಯೂ ಜಿಟಿಜಿಟಿ ಮಳೆಯಾಗಿದೆ.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 