ರಸ್ತೆ- ಚರಂಡಿ ಕಾಮಗಾರಿಗೆ ಚಾಲನೆ
ಲೋಕದರ್ಶನ ವರದಿ
ಚಿಕ್ಕೋಡಿ 19: ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗಣೇಶ ಹುಕ್ಕೇರಿ ಚಾಲನೆ ನೀಡಿದರು.
ಗಣೇಶ ಹುಕ್ಕೇರಿ ಅವರ ವಿಶೇಷ ಪ್ರಯತ್ನದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿವಾಡಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ನಿಮರ್ಾಣ ಕಾಮಗಾರಿ ಮಂಜೂರಾಗಿದೆ. ಈ ಕಾಮಗಾರಿಗಳಿಗೆ ದಿ.18ರಂದು ಚಾಲನೆ ನೀಡಲಾಯಿತು.
"ಚಿಕ್ಕೋಡಿ ಕ್ಷೇತ್ರದಲ್ಲಿ ಪ್ರಕಾಶ ಹುಕ್ಕೇರಿ ಶಾಸಕರಾಗಿದ್ದ ಕಾಲದಿಂದಲೂ ನಿರಂತರ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುತ್ತ ಬರಲಾಗಿದೆ. ಸರಕಾರ ಯಾವುದೇ ಇದ್ದರೂ ಕ್ಷೇತ್ರಕ್ಕೆ ಸಾಕಷ್ಟು ಅನುಧಾನ ತರಲಾಗುತ್ತಿದೆ. ಕ್ಷೇತ್ರದ ಜನರ ಎಲ್ಲ ಬೇಡಿಕೆಗಳಿಗೆ ನಿರಂತರ ಸ್ಪಂದಿಸುತ್ತಿರುವುದರಿಂದಲೇ ಜನರು ನಮ್ಮನ್ನು ಪ್ರತಿ ಬಾರಿ ಆಯ್ಕೆ ಮಾಡುವ ಮೂಲಕ ಪ್ರೋತ್ಸಾಹ ನೀಡುತ್ತ ಬರುತ್ತಿದ್ದಾರೆ" ಎಂದು ಗಣೇಶ ಹುಕ್ಕೇರಿ ಈ ಸಂದರ್ಭದಲ್ಲಿ ತಿಳಿಸಿದರು. ಗ್ರಾಮಸ್ಥರು, ಸ್ಥಳೀಯ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 