ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತಾ ಅಭಿಯಾನ ಜನ ಜಾಗೃತಿ ಜಾಥಾ
ಲೋಕದರ್ಶನವರದಿ
ಮುಧೋಳ- ಪ್ರತಿಯೊಬ್ಬ ವಾಹನ ಚಾಲಕ ರಸ್ತೆ ನಿಯಮಗಳನ್ನು ಸರಿಯಾಗಿ ಪಾಲಿಸಿ, ಜೀವ ಉಳಿಸಿಕ್ಕೊಳ್ಳಬೇಕು, ಮದ್ಯಪಾನ ಮರಣಕ್ಕೆ ಆಹ್ವಾನವಿದ್ದಂತೆ, ಸಿಟ್ ಬೆಲ್ಟ ಧರಿಸಿ ,ವಾಹನ ಚಲಿಸುವಾಗ ಮೊಬೈಲ್ ಬಳಸದೇ, ಹೆಲ್ಮೆಟ್ ಧರಿಸಿ, ಸುರಕ್ಷಿತ ರಸ್ತೆ ಸಂಚಾರದ ಅರಿವು ಎಲ್ಲರಿಗೊ ಇರಬೇಕೆಂದು ಸರಕಾರಿ ಪ್ರಥಮ ದಜರ್ೆ ಕಾಲೇಜ ಪ್ರಾಚಾರ್ಯ ಎನ್.ಎಲ್. ತೇರದಾಳ ಹೇಳಿದರು,
ಅವರು ಕಾಲೇಜ್ ಹಾಗೂ ಪೊಲಿಸ ಇಲಾಖೆಯ ಸಹಯೋಗದಲ್ಲಿ ನಡೆದ ಮಾನವ ಸರಪಳಿ ಹಾಗೂ ಜನಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ವಾಹನ ಚಾಲಕರು ಕಡ್ಡಾಯವಾಗಿ ಪಾಲಿಸಬೇಕಾದ ನಿಯಮಗಳನ್ನೊಳಗೊಂಡ ಕರಪತ್ರವನ್ನು ಸಾರ್ವಜನಿಕರಿಗೆ ವಿತರಿಸಿ ಮಾತನಾಡಿ, ವಾಹನಕ್ಕೆ ಸಂಬಂಧಪಟ್ಟ ಎಲ್ಲ ಕಾಗದಪತ್ರಗಳನ್ನು ತಮ್ಮ ಬಳಿ ಇಟ್ಟುಕೊಂಡು ದಂಡದಿಂದ ಮುಕ್ತಿ ಹೊಂದಬೇಕು 18 ವರ್ಷದೊಳಗಿನ ಮಕ್ಕಳ ಕೈಯಲ್ಲಿ ವಾಹನವನ್ನು ಕೊಡಬಾರದೆಂದು ಸಲಹೆ ನೀಡಿದರು.
ಉಪನ್ಯಾಸಕರಾದ ಎಸ್.ಬಿ.ರಾಯನಗೌಡರ, ಎಸ್.ಎಂ. ಹಾದಿಮನಿ ,ಮುಸ್ತಫಾ ಮುಂಡರಗಿ, ಉಷಾರಾಣಿ, ರೇಖಾಮಣಿ, ಹಾಗೂ ಅತಿಥಿ ಉಪನ್ಯಾಸಕರು ಮೆರವಣಿಗೆಯ ನೇತೃತ್ವ ವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 