ರಸ್ತೆ ಅಪಘಾತ: ಐದು ಜನರಿಗೆ ಗಾಯ
ಬೈಲಹೊಂಗಲ 29: ರಸ್ತೆ ಪಕ್ಕದಲ್ಲಿ ಹೆಸರು ಕಾಳು ಹಾಕಿ ಒಣಗಿಸುತ್ತಿದ್ದ ಐವರ ಮೇಲೆ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಹರಿದ ಪರಿಣಾಮ ಐದು ಜನ ಗಾಯಗೊಂಡ ಘಟನೆ ತಾಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ರವಿವಾರ ಸಂಭವಿಸಿದೆ.
ಬೆಳವಡಿ ಗ್ರಾಮದ ಮಹೇಶ ರೇವನ್ನವರ(21), ಸಂಜು ಮುರಗೋಡ(35), ವಿನೋದ ಕುಂಬಾರ(14), ಸಿದ್ದಾರೂಡ ಗುಗ್ಗರಿ(24), ಮಲ್ಲಪ್ಪ ಉಡಕೇರಿ(45) ಈ ದುರ್ಘಟನೆಯಲ್ಲಿ ಗಾಯಗೊಂಡಿದ್ದು
ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕಾರು ಬೈಲಹೊಂಗಲದಿಂದ ಸವದತ್ತಿ ಕಡೆ ಹೊರಡುವ ಮಾರ್ಗದ ಮದ್ಯದಲ್ಲಿರುವ ಬೆಳವಡಿ ಹಳೆ ಬಸ್ ನಿಲ್ದಾಣದ ಬಳಿ ಅವಘಡ ಸಂಭವಿಸಿದೆ.
ಚಾಲಕ ರಾಮಪ್ಪ ಗಂಗಪ್ಪ ಹುಲಕುಂದನನ್ನು ಬಂಧಿಸಲಾಗಿದೆ. ಆಕ್ರೋಶಗೊಂಡ ಗ್ರಾಮಸ್ಥರು ಕೆಲಕಾಲ ಸವದತ್ತಿ-ಬೆಳಗಾವಿ ರಸ್ತೆ ತಡೆದು ಪ್ರತಿಭಟಿಸಿದ್ದರ ಪರಿಣಾಮ ಪ್ರಯಾಣಿಕರು ಪರದಾಡುವಂತಾಯಿತು.
ಕಿತ್ತೂರು ಸಿಪಿಐ ಶ್ರೀಕಾಂತ
ತೋಟಗಿ ಪ್ರತಿಭಟನಾಕಾರರ ಮನಒಲಿಸಿ ರಸ್ತೆ ತಡೆ ನಿಮರ್ಾಣ ಮಾಡುವುದಾಗಿ ಭರವಸೆ ನೀಡಿದ
ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂತೆಗೆದುಕೊಂಡರು. ಪ್ರಕರಣ ದೊಡವಾಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 