ರಸ್ತೆ ಅಪಘಾತ: ಮೂವರು ಸ್ಥಳದಲ್ಲೇ ಸಾವು
Road accident: Three died on the spot
ಧಾರವಾಡ 20: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಕ್ಕೆ ಬೆಳಗಾವಿ ಕಡೆಯಿಂದ ಧಾರವಾಡ ಕಡೆಗೆ ಅತಿ ವೇಗದಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ತಾಲೂಕಿನ ಬೇಲೂರ ಬಳಿ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಗುರುವಾರ (ಫೆ.20) ನಡೆದಿದೆ.
ತೀವ್ರವಾಗಿ ಗಾಯಗೊಂಡ ಮೂವರೂ ಸ್ಥಳದಲ್ಲಿಯೇ ಅಸುನೀಗಿದ್ದಾರೆ.
ಬೈಲಹೊಂಗಲ ಮೂಲದ ಧಾರವಾಡ ತಾಲೂಕಿನ ಕೋಟೂರು ಗ್ರಾಮದ ನಿವಾಸಿ ಮಹ್ಮದಜುಬೇರ ಜಮೀರ ಅಹ್ಮದ ಬಾಗೇವಾಡಿ (18), ಗದಗ ತಾಲೂಕಿನ ಜಗಾಪೂರ ಗ್ರಾಮದ, ಧಾರವಾಡ ತಾಲೂಕಿನ ಹೆಗ್ಗೇರಿ ನಿವಾಸಿ ಶಿವರಾಜ ಹನಮಪ್ಪ ಮುದಕಣ್ಣವರ (23) ಮತ್ತು ಧಾರವಾಡ ತಾಲೂಕಿನ ಕೋಟೂರು ಗ್ರಾಮದ ಇರ್ಫಾನ ಹುಸೇನಸಾಬ ಸಂಗೊಳ್ಳಿ (18) ಮೃತಪಟ್ಟ ಯುವಕರು.
ಘಟನಾ ಸ್ಥಳಕ್ಕೆ ಸಿಪಿಐ ಶಮೀರ ಮುಲ್ಲಾ ಮತ್ತು ಪಿಎಸ್ ಐ ಸಿದ್ರಾಮಪ್ಪ ಉನ್ನದ ಭೇಟಿ ನೀಡಿದ್ದಾರೆ. ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 