ಸಹರಾನ್ಪುರದಲ್ಲಿ ರಸ್ತೆ ಅಪಘಾತ: ದೆಹಲಿಯ ಒಂದೇ ಕುಟುಂಬದ ನಾಲ್ವರು ಸಾವು
ಸಹರಾನ್ಪುರ, ಫೆ 10, ಉತ್ತರ ಪ್ರದೇಶದ ಈ ಜಿಲ್ಲೆಯ ನಾಗ್ಲಾ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದೆಹಲಿಯ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ವಿದ್ಯಾ ಸಾಗರ್ ಮಿಶ್ರಾ ಸೋಮವಾರ ಇಲ್ಲಿ ತಿಳಿಸಿದ್ದಾರೆ. ದೆಹಲಿಯ ಪಂಜಾಬಿ ಬಾಗ್ ನಿವಾಸಿ ಕುಟುಂಬ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಆಗಮಿಸಿದ್ದರು. ಮದುವೆಯ ನಂತರ, ಕುಟುಂಬದ ಸದಸ್ಯರು ವಾಪಸ್ ಮನೆಗೆ ಹಿಂದಿರುಗುತ್ತಿದ್ದಾಗ, ಅವರಿದ್ದ ಕಾರು ಭಾನುವಾರ ರಾತ್ರಿ ಸುಬ್ರಿ ಕುಲುಮೆ ಬಳಿ ಮರದ ದಿಮ್ಮಿಗಳನ್ನು ತುಂಬಿದ ಟ್ರಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದಿದೆ.ಭಗವತಿ ಶರ್ಮಾ (55), ಅವರ ಪತ್ನಿ ಮಮತಾ (50), ಅವರ ಪುತ್ರ ಗೌರವ್ (28) ಮತ್ತು ಗೌರವ್ ಅವರ ಪತ್ನಿ ನಿಧಿ (24) ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಅವರ ಕಿರಿಯ ಪುತ್ರ ಪ್ರತೀಕ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ 