ಉತ್ತರ ಪ್ರದೇಶದಲ್ಲಿ ರಸ್ತೆ ಅಪಘಾತ: ಸಕ್ಕರೆ ಕಾರ್ಖಾನೆಯ ಐವರು ನೌಕರರು ಸಾವು
ರಾಮ್ ಪುರ ಫೆ 26: ಉತ್ತರ ಪ್ರದೇಶದ ಶಹಾಬಾದ್ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಮದುವೆ ದಿಬ್ಬಣ ಹೊತ್ತು ಸಾಗುತ್ತಿದ್ದ ಖಾಸಗಿ ಬಸ್ಗೆ ಕಾರೊಂದು ಡಿಕ್ಕಿ ಹೊಡೆದು ಅದರಲ್ಲಿದ್ದ ಸಕ್ಕರೆ ಕಾರ್ಖಾನೆಯ ಐವರು ನೌಕರರು ಸಾವನ್ನಪ್ಪಿದ್ದಾರೆ.
ನೌಕರರು ರಾಣಾ ಸಕ್ಕರೆ ಕಾರ್ಖಾನೆಯಿಂದ ಹಿಂದಿರುಗುತ್ತಿದ್ದಾಗ ಧಕಿಯಾ ರಸ್ತೆಯ ಬಂದರ್ ಗ್ರಾಮದ ಬಳಿ ಕಾರು ಬಸ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ವಿದ್ಯಾ ಸಾಗರ್ ಶರ್ಮಾ ತಿಳಿಸಿದ್ದಾರೆ.
ಅಪಘಾತದಲ್ಲಿ ಮುಖೇಶ್, ಹರ್ಬೀರ್, ಶಿವ ಚರಣ್, ದಿಗ್ಗು ಮತ್ತು ಅಮಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಪೊಸ್ಬಾಲ್, ಇಮ್ರಾನ್, ವೀರೇಶ್ ಮತ್ತು ಅಂಕುಶ್ ಗಂಭೀರ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 