ನೆರೆಯಿಂದಾಗಿ ರಾಜ್ಯದಲ್ಲಿನ ರಸ್ತೆ, ರೈಲ್ವೆ ಸಂಚಾರ ಸ್ಥಗಿತ: ಲಾಭ ಪಡೆಯುತ್ತಿರುವ ವಿಮಾನಯಾನ ಸಂಸ್ಥೆಗಳು
ಬೆಂಗಳೂರು, ಆಗಸ್ಟ್ 11 ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ರಸ್ತೆ ಮತ್ತು ರೈಲು ಸೇವೆಗಳು ಸ್ಥಗಿತಗೊಂಡಿದ್ದು, ಪರಿಸ್ಥಿತಿಯ ಲಾಭ ಪಡೆಯುತ್ತಿರುವ ವಿಮಾನಯಾನ ಸಂಸ್ಥೆಗಳು ಕರ್ನಾಟಕದ ಕರಾವಳಿ ಕೇಂದ್ರವಾದ ಬಂದರು ನಗರಿ ಮಂಗಳೂರಿಗೆ ಪ್ರಯಾಣ ಶುಲ್ಕವನ್ನು ಹೆಚ್ಚಿಸಿವೆ. ಮೂಲಗಳ ಪ್ರಕಾರ, ಬೆಂಗಳೂರು ಮತ್ತು ಮಂಗಳೂರು ನಡುವಿನ ವಿಮಾನಗಳ ಟಿಕೆಟ್ಗಳು 14000 ರೂ.ನಿಂದ 18000 ರೂ.ವರೆಗೆ ತಲುಪಿದೆ. ಈ ಮೊದಲು ಶುಲ್ಕ 2500 ರೂ.ಗಳಿಂದ 5000 ರೂ.ಇತ್ತು. ಸರ್ಕಾರದಿಂದ ಯಾವುದೇ ನಿಯಂತ್ರಣವಿಲ್ಲದ ಕಾರಣ ವಿಮಾನಯಾನ ಸಂಸ್ಥೆಗಳು ಪ್ರಾಕೃತಿಕ ವಿಪತ್ತಿನ ಲಾಭ ಪಡೆದು ಸಾರ್ವಜನಿಕರನ್ನು ಸುಲಿಗೆ ಮಾಡುತ್ತಿವೆ ಎಂದು ಬೆಂಗಳೂರಿನಿಂದ ಮಂಗಳೂರಿಗೆ ಆಗಾಗ್ಗೆ ಪ್ರಯಾಣಿಸುವ ಸುರೇಶ್ ಯುಎನ್ಐಗೆ ತಿಳಿಸಿದರು. ರಾಜ್ಯದ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಮಳೆ ಬೀಳುತ್ತಿರುವುದರಿಂದ, ಹಲವಾರು ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಯಲ್ಲಿನ ಸೇತುವೆಗಳು ನದಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದು, ಹಲವೆಡೆ ಸಂಚಾರ ಸ್ಥಗಿತಗೊಂಡಿದೆ. ಮಂಗಳೂರು ವಿಭಾಗದಲ್ಲಿ ಹಳಿ ಮೇಲೆ ಭೂಕುಸಿತ ಮತ್ತು ನೀರು ನಿಂತಿರುವುದರಿಂದ ಮಂಗಳೂರು ಮತ್ತು ಬೆಂಗಳೂರು ನಡುವಿನ ಎಲ್ಲಾ ರೈಲು ಸೇವೆಗಳನ್ನು ಆಗಸ್ಟ್ 23ರವರೆಗೆ ರದ್ದುಪಡಿಸಲಾಗಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 