ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾಥರ್ಿಗಳಿಂದ ರಸ್ತೆ ತಡೆ
ನಣದಿವಾಡಿ ಗ್ರಾಮದಲ್ಲಿ ಪ್ರತಿಯೊಂದು ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾಥರ್ಿಗಳು ರಸ್ತೆ ತಡೆ ನಡೆಸಿದರು.
ಮಾಂಜರಿ 20: ಯಕ್ಸಂಬಾ ದಿಂದ ಚಿಕ್ಕೋಡಿ ಮತ್ತು ಚಿಕ್ಕೋಡಿಯಿಂದ ಯಕ್ಸಂಬಾ ಪಟ್ಟಣಕ್ಕೆ ತೆರಳುವ ಪ್ರತಿಯೊಂದು ಬಸ್ ನಿಲುಗಡೆ ಮಾಡುವಂತೆ ಒತ್ತಾಯಿಸಿ ಗುರುವಾರ ಸಮೀಪದ ನಣದಿವಾಡಿ ಗ್ರಾಮದ ವಿದ್ಯಾಥರ್ಿಗಳು ಮತ್ತು ಪಾಲಕರು ರಸ್ತೆ ತಡೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು.
ನಣದಿವಾಡಿ ವಿದ್ಯಾಥರ್ಿಗಳು ಯಕ್ಸಂಬಾ ಮತ್ತು ಚಿಕ್ಕೋಡಿ ಪಟ್ಟಣಕ್ಕೆ ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಆದರೆ ನಣದಿವಾಡಿ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಗಳು ನಿಲುಗಡೆಯಾಗುವುದಿಲ್ಲ. ಇದರಿಂದಾಗಿ ವಿದ್ಯಾಥರ್ಿಗಳು ಶಾಲೆಗೆ ಸರಿಯಾದ ವೇಳೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಇದರಿಂದ ವಿದ್ಯಾಭ್ಯಾಸ ಕುಂಠಿತವಾಗುತ್ತಿದೆ ಎಂದು ಪಾಲಕರು ತಿಳಿಸಿದ್ದಾರೆ.
ಯಕ್ಸಂಬಾ ಪಟ್ಟಣದಿಂದ ಮತ್ತು ಚಿಕ್ಕೋಡಿ ಪಟ್ಟಣದಿಂದ ಬಹುತೇಕ ಎಲ್ಲ ಬಸ್ಗಳು ತುಂಬಿಯೇ ಬರುತ್ತಿವೆ. ಇದರಿಂದ ನಣದಿವಾಡಿ ಗ್ರಾಮದಲ್ಲಿ ಬಸ್ ನಿಲ್ಲುವುದಿಲ್ಲಾ, ವಿದ್ಯಾಥರ್ಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಬಿಡಬೇಕು ಎಂದು ಕೆ.ಎಸ್.ಅರ್.ಟಿ ಸಿ ಚಿಕ್ಕೋಡಿ ಘಟಕದ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿ ಒತ್ತಾಯಿಸಿದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 