ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾಥರ್ಿಗಳಿಂದ ರಸ್ತೆ ತಡೆ
ನಣದಿವಾಡಿ ಗ್ರಾಮದಲ್ಲಿ ಪ್ರತಿಯೊಂದು ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾಥರ್ಿಗಳು ರಸ್ತೆ ತಡೆ ನಡೆಸಿದರು.
ಮಾಂಜರಿ 20: ಯಕ್ಸಂಬಾ ದಿಂದ ಚಿಕ್ಕೋಡಿ ಮತ್ತು ಚಿಕ್ಕೋಡಿಯಿಂದ ಯಕ್ಸಂಬಾ ಪಟ್ಟಣಕ್ಕೆ ತೆರಳುವ ಪ್ರತಿಯೊಂದು ಬಸ್ ನಿಲುಗಡೆ ಮಾಡುವಂತೆ ಒತ್ತಾಯಿಸಿ ಗುರುವಾರ ಸಮೀಪದ ನಣದಿವಾಡಿ ಗ್ರಾಮದ ವಿದ್ಯಾಥರ್ಿಗಳು ಮತ್ತು ಪಾಲಕರು ರಸ್ತೆ ತಡೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು.
ನಣದಿವಾಡಿ ವಿದ್ಯಾಥರ್ಿಗಳು ಯಕ್ಸಂಬಾ ಮತ್ತು ಚಿಕ್ಕೋಡಿ ಪಟ್ಟಣಕ್ಕೆ ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಆದರೆ ನಣದಿವಾಡಿ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಗಳು ನಿಲುಗಡೆಯಾಗುವುದಿಲ್ಲ. ಇದರಿಂದಾಗಿ ವಿದ್ಯಾಥರ್ಿಗಳು ಶಾಲೆಗೆ ಸರಿಯಾದ ವೇಳೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಇದರಿಂದ ವಿದ್ಯಾಭ್ಯಾಸ ಕುಂಠಿತವಾಗುತ್ತಿದೆ ಎಂದು ಪಾಲಕರು ತಿಳಿಸಿದ್ದಾರೆ.
ಯಕ್ಸಂಬಾ ಪಟ್ಟಣದಿಂದ ಮತ್ತು ಚಿಕ್ಕೋಡಿ ಪಟ್ಟಣದಿಂದ ಬಹುತೇಕ ಎಲ್ಲ ಬಸ್ಗಳು ತುಂಬಿಯೇ ಬರುತ್ತಿವೆ. ಇದರಿಂದ ನಣದಿವಾಡಿ ಗ್ರಾಮದಲ್ಲಿ ಬಸ್ ನಿಲ್ಲುವುದಿಲ್ಲಾ, ವಿದ್ಯಾಥರ್ಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಬಿಡಬೇಕು ಎಂದು ಕೆ.ಎಸ್.ಅರ್.ಟಿ ಸಿ ಚಿಕ್ಕೋಡಿ ಘಟಕದ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿ ಒತ್ತಾಯಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 