ಚಾಲಕರಿಗೆ ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಕಾರ್ಯಕ್ರಮ
Road safety awareness program for drivers
ದಾಂಡೇಲಿ 23: ದಾಂಡೇಲಿಯ ನಗರ ಪೋಲಿಸ್ ಠಾಣೆಯ ಆಶ್ರಯದಲ್ಲಿ ಬಸ್ ನಿಲ್ದಾಣದ ಎದುರಿನ ಆಟೋ ನಿಲ್ದಾಣದಲ್ಲಿ ಚಾಲಕರಿಗೆ ರಸ್ತೆ ಸುರಕ್ಷತೆಯ ಕುರಿತಂತೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಿ.ಪಿ.ಐ ಶಿವಾನಂದ ಅಂಬಿಗೇರ ಅವರು ರಿಕ್ಷಾ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರನ್ನುದ್ದೇಶಿಸಿ ಮಾತನಾಡಿ ಜನರ ಜೀವವನ್ನು ಉಳಿಸುವಲ್ಲಿ ಚಾಲಕರ ಪಾತ್ರ ಮಹತ್ವದ್ದಾಗಿದೆ. ಪ್ರತಿಯೊಬ್ಬ ಚಾಲಕ ಸಂಚಾರಿ ನಿಯಮಗಳನ್ನು ಅರಿತಿರಬೇಕು ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವಾಹನಗಳ ದಾಖಲೆಗಳನ್ನು ಸರಿಯಾಗಿ ಇಟ್ಟು ವಿಮಾ ಪತ್ರ ತಪ್ಪದೆಹೊಂದಿರಬೇಕು ಎಂದು ನುಡಿದರು. ಈ ಸಂದರ್ಭದಲ್ಲಿ ನಗರ ಠಾಣೆಯ ಪಿ.ಎಸ್.ಐ ಅಮೀನ ಅತ್ತಾರ ಮತ್ತು ಪೋಲಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 