ರೈಲ್ವೆ ಸಚಿವರ ಮನೆಯಲ್ಲಿ ಕಳವು, ನೇಪಾಳದ ಮೂಲದ ವ್ಯಕ್ತಿ ಸೆರೆ
ಮುಂಬೈ,ಅ 4: ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರ ಮುಂಬೈ ಮನೆಯಿಂದ 35 ಸಾವಿರ ರೂಪಾಯಿ ಮೌಲ್ಯದ ನಗದು, ಬೆಳ್ಳಿ ಆಭರಣ ಸಾಮಗ್ರಿಗಳು, ಮೊಬೈಲ್ ಫೋನ್ ಮತ್ತು ಇತರೆ ವಸ್ತಗಳು ಕಳುವಾಗಿರುವ ಸಂಗತಿ ತಡವಾಗಿ ಬಯಲಾಗಿದೆ. ಮುಂಬೈನ ನಿಪೇಲ್ ಸೀ ರೋಡ್ ಬಂಗ್ಲೆ ವಿಲ್ಲಾ ಆಬರ್ಿಟ್ನಲ್ಲಿ ಕಳೆದ ತಿಂಗಳು ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮನೆ ಕೆಲಸಗಾರ ನೇಪಾಳ ಮೂಲದ ವಿಶ್ವಕರ್ಮ ಎಂಬಾತನನ್ನು ಬಂಧಿಸಿದ್ದಾರೆ. ಕಳ್ಳತನದ ಶಂಕೆ ಮೇಲೆ ಈತನನ್ನು ಬಂಧಿಸಲಾಗಿದೆ. ಆದರೆ ಎಲ್ಲ ಕಳ್ಳತನದ ಆರೋಪಗಳನ್ನು ಆತ ನಿರಾಕರಿಸಿದ್ದಾನೆ. ಕಳ್ಳತನ ನಡೆದ ಅವಧಿಯಲ್ಲಿ ತಾನು ಊರಿನಲ್ಲಿ ಇರಲಿಲ್ಲ ಸಂಬಂಧಿಕರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ ಎಂದು ಆತ ಸ್ಪಷ್ಟಪಡಿಸಿದ್ದು, ಪೊಲೀಸರು ಆತನಿಂದ ಐದು ಮೊಬೈಲ್ ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ ಎನ್ನಲಾಗಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 