ಕನರ್ಾಟಕ ತಂಡಕ್ಕೆ ಮರಳಲು ರಾಬಿನ್ ಉತ್ಸುಕ
ಕನರ್ಾಟಕ ತಂಡದೊಂದಿಗೆ 15 ವರ್ಷ ಗುರುತಿಸಿಕೊಂಡಿದ್ದ ರಾಬಿನ್ ಉತ್ತಪ್ಪ ಕಳೆದ ಆವೃತ್ತಿಯಲ್ಲಿ ಸೌರಾಷ್ಟ್ರ ತಂಡಕ್ಕೆ ಆಡಲು ನಿರ್ಧರಿಸಿದ್ದರು. ಆದರೆ ಈಗ ಮತ್ತೊಮ್ಮೆ ಕನರ್ಾಟಕ ತಂಡವನ್ನು ಪ್ರತಿನಿಧಿಸಲು ಉತ್ಸುಕರಾಗಿದ್ದಾರೆ.
ಮುಂಬರುವ ಕನರ್ಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ನಲ್ಲಿ ರಾಬಿನ್ ಉತ್ತಪ್ಪ ಬೆಂಗಳೂರು ಬ್ಲಾಸ್ಟಸರ್್ ತಂಡವನ್ನು ಪ್ರತಿನಿಧಿಸುತ್ತಿದ್ದು, ಮತ್ತೊಮ್ಮೆ ಕನರ್ಾಟಕಕ್ಕೆ ಕಮ್ ಬ್ಯಾಕ್ ಮಾಡುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಕನರ್ಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ನ್ನು ಉತ್ತಪ್ಪ ಸಂಪಕರ್ಿಸಿದ್ದು, ಕೆಪಿಎಲ್ ನಲ್ಲಿ ಭಾಗವಹಿಸಲು ಉತ್ಸಾಹ ತೋರಿದ್ದಾರೆ. ಕೆಎಸ್ ಸಿಎ ಉತ್ತಪ್ಪ ಅವರ ಪ್ರಸ್ತಾವನೆಗೆ ಸಂತಸ ವ್ಯಕ್ತಪಡಿಸಿದ್ದು, ಕನರ್ಾಟಕದ ಪರ ಉತ್ತಪ್ಪ ಎರಡನೇ ಇನ್ನಿಂಗ್ಸ್ ಪ್ರಾರಂಭಿಸಲಿದ್ದಾರೆ.
"ಕೆಎಸ್ ಸಿಎ ಜೊತೆ ಮಾತನಾಡಿದ್ದು, ಕೆಪಿಎಲ್ ನಲ್ಲಿ ಆಡುವುದಕ್ಕೆ ಆಸಕ್ತಿ ಇರುವುದನ್ನು ಹೇಳಿದ್ದೇನೆ. ಈ ಬಗ್ಗೆ ಕೆಎಸ್ ಸಿಎ ಅಧಿಕಾರಿಗಳೂ ಸಂತಸ ವ್ಯಕ್ತಪಡಿಸಿದ್ದಾರೆ, ಈ ಅವಕಾಶವನ್ನು ಉತ್ತಮವಾಗಿ ಬಳಸಿಕೊಳ್ಳಬೇಕೆಂದಿದ್ದೇನೆ ಎಂದು ಉತ್ತಪ್ಪ ಹೇಳಿದ್ದಾರೆ. ಶಿಸ್ತು ಕ್ರಮದ ಕಾರಣಕ್ಕಾಗಿ 2016-17 ರಲ್ಲಿ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ನಲ್ಲಿ ರಾಜ್ಯ ತಂಡದಿಂದ ಉತ್ತಪ್ಪ ಅವರನ್ನು ಕೈಬಿಡಲಾಗಿತ್ತು.
ಇದಾದ ಬಳಿಕ ರಾಜ್ಯ ತಂಡದೊಂದಿಗೆ ಉತ್ತಪ್ಪ ಅವರ ಸಂಬಂಧವೂ ಹದಗೆಟ್ಟಿತ್ತು. ಆದರೆ ಈಗ ಮತ್ತೊಮ್ಮೆ ರಾಜ್ಯಕ್ಕೆ ಮರಳಲು ಉತ್ತಪ್ಪ ಆಸಕ್ತಿ ತೋರುತ್ತಿದ್ದು, ನಾನೂ ಕೆಲವೊಂದು ವಿಚಾರಗಳನ್ನು ಸರಿಪಡಿಸಿಕೊಳ್ಳುವುದಿತ್ತು. ಅದನ್ನು ಮಾಡಿದ್ದೇನೆ ಆ ಬಗ್ಗೆ ಸಂತಸವಿದೆ ಎಂದು ಉತ್ತಪ್ಪ ಹೇಳಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 