ನಿತ್ಯ ಯೋಗದಿಂದ ಸದೃಢ ಆರೋಗ್ಯ ಸಾಧ್ಯ
Robust health is possible through daily yoga.
ನಿತ್ಯ ಯೋಗದಿಂದ ಸದೃಢ ಆರೋಗ್ಯ ಸಾಧ್ಯ
ರಾಯಬಾಗ 16: ಪ್ರತಿನಿತ್ಯ ಯೋಗ ಮಾಡುವುದರಿಂದ ಸದೃಢ ಆರೋಗ್ಯ ಹೊಂದಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಜನಜಾಗೃತಿ ನಿರ್ದೇಶಕ ವಸಂತ ಹೊಸಮನಿ ಹೇಳಿದರು.
ಅವರು ಅಳಗವಾಡಿ ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ 33ನೇ ಶಿವಾನುಭವ ಗೋಷ್ಠಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
"ಆಹಾರವೇ ಓಷಧವಾಗಬೇಕು; ಓಷಧವೇ ಆಹಾರವಾಗಬಾರದು" ಎಂದು ಅವರು ತಿಳಿಸಿದರು. ನಿಯಮಿತ ಯೋಗಾಭ್ಯಾಸ ಹಾಗೂ ಆರೋಗ್ಯಕರ ಜೀವನಶೈಲಿಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು. ಕಾರ್ಯಕ್ರಮದ ಆಶೀರ್ವಚನ ನೀಡಿದ ಬಸವರಾಜ ಶರಣರು, "ನಮ್ಮ ಪೂರ್ವಜರು ಆಧ್ಯಾತ್ಮದೊಂದಿಗೆ ಆರೋಗ್ಯಯುತ ಜೀವನ ನಡೆಸುತ್ತಿದ್ದರು. ಅವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸಬೇಕು" ಎಂದು ಹೇಳಿದರು.
ಕೆ.ಎಲ್.ಇ. ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಹಣಮಂತ ಗುರುವ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ರಾಯಬಾಗ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಶೋಕ ಅಂಗಡಿ, ಮಾಜಿ ಜಿಪಂ ಸದಸ್ಯ ಮಹಾದೇವ ಶಿರಗೂರೆ, ನಿವೃತ್ತ ಶಿಕ್ಷಕ ಮಹಾದೇವ ಮಠದ, ನಿಂಗಪ್ಪ ತೇರದಾಳೆ, ಶಿವಗೊಂಡ ಹಂಜೆ, ಯಮನಪ್ಪ ಮಂಟೂರೆ, ಕಲ್ಲಪ್ಪ ಕೊಕಟನೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 