ಕೊರೊನಾ ಹೋರಾಟಕ್ಕೆ ರೋಹಿತ್ 80 ಲಕ್ಷ ರೂ.ಪರಿಹಾರ
ಮುಂಬೈ, ಮಾ 31,ಕೊರೊನಾ ವೈರಸ್ ಸೋಂಕು ವಿರುದ್ಧದ ಹೋರಾಟವನ್ನು ಬೆಂಬಲಿಸಿರುವ ಟೀಮ್ ಇಂಡಿಯಾ ಆಟಗಾರ ರೋಹಿತ್ ಶರ್ಮ, ಮಂಗಳವಾರ 80 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.ಪಿಎಂ-ಕೇರ್ಸ್ ನಿಧಿಗೆ 45 ಲಕ್ಷ ರೂ., ಮಹಾರಾಷ್ಟ್ರ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂ. ಜೊಮಾಟೊ ಫೀಡಿಂಗ್ ಇಂಡಿಯಾಗೆ 5 ಲಕ್ಷ ರೂ. ಹಾಗೂ ಬಿದಿ ನಾಯಿಗಳ ಕಲ್ಯಾಣಕ್ಕೆ 5 ಲಕ್ಷ ರೂ. ನೆರವು ನೀಡಿರುವುದಾಗಿ ರೋಹಿತ್ ಹೇಳಿದ್ದಾರೆ. ಜತೆಗೆ 32 ವರ್ಷದ ಬಲಗೈ ಬ್ಯಾಟ್ಸ್ ಮನ್ ರೋಹಿತ್, ನಮ್ಮ ದೇಶವನ್ನು ಮೊದಲಿನ ಸ್ಥಿತಿಗೆ ತರುವ ಜವಾಬ್ದಾರಿ ನಮ್ಮ ಮೇಲಿದ್ದು, ನಮ್ಮ ನಾಯಕರ ಬೆಂಬಲಕ್ಕೆ ನಿಲ್ಲಬೇಕಾದ ಅಗತ್ಯವಿದೆ ಎಂದಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮ ಈಗಾಗಲೇ ಪಿಎಂ-ಕೇರ್ಸ್ ನಿಧಿಗೆ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಭಾರತ ಮಹಿಳಾ ಏಕದಿನ ತಂಡದ ನಾಯಕಿ ಮತ್ತು ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ಸಹ ಕೊರೊನಾ ವಿರುದ್ಧದ ಹೋರಾಟಕ್ಕೆ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ.ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಫ್ರಾ, ಕೊರೊನಾ ವೈರಸ್ ಸೋಂಕಿನ ವಿರುದ್ಧದ ಹೋರಾಟದ ಪರಿಹಾರ ನಿಧಿಗೆ ಕೇಂದ್ರ ಮತ್ತು ಹರಿಯಾಣ ಸರಕಾರಗಳಿಗೆ ಒಟ್ಟು 3 ಲಕ್ಷ ರೂ. ದೇಣಿಗೆ ನೀಡಿದ್ದೇನೆ ಎಂದು ಮಂಗಳವಾರ ಹೇಳಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 