ರೋಟರಿ ಕ್ಲಬ್ ನಿಂದ ವಿಶ್ವ ಪರಿಸರ ದಿನಾಚರಣೆ
Rotary Club celebrates World Environment Day
ವಿಜಯಪುರ 06: ನಗರದ ಸಂಜೀವಿನಿ ವಿದ್ಯಾವರ್ಧಕ ಸಂಸ್ಥೆ ಮತ್ತು ರೋಟರಿ ಕ್ಲಬ್ ಆಫ್ ವಿಜಯಪುರ ಉತ್ತರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿ ನಿವೃತ್ತಿ ಜಿಲ್ಲಾ ಪರಿಸರಾಧಿಕಾರಿ ಒಂ ಮನಿಯಾರ ಅವರು ಮಾತನಾಡಿ ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವತ್ತ ಗಮನಹರಿಸಬೇಕು. ಗ್ರಹದಿದ ಪ್ಲಾಸ್ಟಿಕ ಮಾಲಿನ್ಯವನ್ನು ತೊಡೆದುಹಾಕುವುದು ಹವಾಮಾನ ಕ್ರಮ, ಸುಸ್ಥಿರ ಉತ್ಪಾದನೆ ಮತ್ತು ಬಳಕೆ, ಸಮುದ್ರಗಳು ಮತ್ತು ಸಾಗರಗಳ ರಕ್ಷಣೆ ಮತ್ತು ಪರಿಸರ ವ್ಯವಸ್ಥೆಗಳನ್ನು ದುರಸ್ತಿ ಮಾಡುವುದು ಮತ್ತು ಜೀವ ವೈವಿಧ್ಯತೆಯನ್ನು ಉಳಿಸಿಕೊಳ್ಲಬೇಕೆಂದು ಸಂಜೀವಿನಿ ಫಾರ್ಮಸಿ, ನರ್ಸಿಂಗ್, ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಗೆ ತಿಳಿಸಿದರು.
ಸಂಸ್ಥೆಯ ಸಂಸ್ಥಾಪಕರು ಬಸವರಾಜ ಸೊನ್ನದ, ಅಧ್ಯಕ್ಷರು ಸಿದ್ದು ಸೊನ್ನದ, ಡಾ. ಮೀನಾಕ್ಷಿ ಸೊನ್ನದ, ನರ್ಸಿಂಗ್ ಪ್ರಾಚಾರ್ಯರು ಪ್ರೊಫೆಸರ್ ಆನಂದ ಹೇರಲಗಿ, ಮತ್ತು ರೋಟರಿ ಕ್ಲಬ್ಬಿನ ಕಾರ್ಯದರ್ಶಿ ಡಾ. ಶ್ರೀಪಾದ ಕುಲಕರ್ಣಿ, ರವಿ ಶಿಲೇದಾರ, ಅಶ್ವಿನಿ ಶಿಲೇದಾರ, ಉದಯ ಯಳವಾರ, ಡಾ!!ರಾಘವೇಂದ್ರ ಇಜೇರಿ ಹಾಗೂ ಕಾಲೇಜಿನ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 