ರೋಟರಿ ಕ್ಲಬ್ ನಿಂದ ವಿಶ್ವ ಪರಿಸರ ದಿನಾಚರಣೆ
Rotary Club celebrates World Environment Day
ವಿಜಯಪುರ 06: ನಗರದ ಸಂಜೀವಿನಿ ವಿದ್ಯಾವರ್ಧಕ ಸಂಸ್ಥೆ ಮತ್ತು ರೋಟರಿ ಕ್ಲಬ್ ಆಫ್ ವಿಜಯಪುರ ಉತ್ತರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿ ನಿವೃತ್ತಿ ಜಿಲ್ಲಾ ಪರಿಸರಾಧಿಕಾರಿ ಒಂ ಮನಿಯಾರ ಅವರು ಮಾತನಾಡಿ ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವತ್ತ ಗಮನಹರಿಸಬೇಕು. ಗ್ರಹದಿದ ಪ್ಲಾಸ್ಟಿಕ ಮಾಲಿನ್ಯವನ್ನು ತೊಡೆದುಹಾಕುವುದು ಹವಾಮಾನ ಕ್ರಮ, ಸುಸ್ಥಿರ ಉತ್ಪಾದನೆ ಮತ್ತು ಬಳಕೆ, ಸಮುದ್ರಗಳು ಮತ್ತು ಸಾಗರಗಳ ರಕ್ಷಣೆ ಮತ್ತು ಪರಿಸರ ವ್ಯವಸ್ಥೆಗಳನ್ನು ದುರಸ್ತಿ ಮಾಡುವುದು ಮತ್ತು ಜೀವ ವೈವಿಧ್ಯತೆಯನ್ನು ಉಳಿಸಿಕೊಳ್ಲಬೇಕೆಂದು ಸಂಜೀವಿನಿ ಫಾರ್ಮಸಿ, ನರ್ಸಿಂಗ್, ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಗೆ ತಿಳಿಸಿದರು.
ಸಂಸ್ಥೆಯ ಸಂಸ್ಥಾಪಕರು ಬಸವರಾಜ ಸೊನ್ನದ, ಅಧ್ಯಕ್ಷರು ಸಿದ್ದು ಸೊನ್ನದ, ಡಾ. ಮೀನಾಕ್ಷಿ ಸೊನ್ನದ, ನರ್ಸಿಂಗ್ ಪ್ರಾಚಾರ್ಯರು ಪ್ರೊಫೆಸರ್ ಆನಂದ ಹೇರಲಗಿ, ಮತ್ತು ರೋಟರಿ ಕ್ಲಬ್ಬಿನ ಕಾರ್ಯದರ್ಶಿ ಡಾ. ಶ್ರೀಪಾದ ಕುಲಕರ್ಣಿ, ರವಿ ಶಿಲೇದಾರ, ಅಶ್ವಿನಿ ಶಿಲೇದಾರ, ಉದಯ ಯಳವಾರ, ಡಾ!!ರಾಘವೇಂದ್ರ ಇಜೇರಿ ಹಾಗೂ ಕಾಲೇಜಿನ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 