ಸಿಲಿಕಾನ್ ಸಿಟಿಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ
ಬೆಂಗಳೂರು, ಡಿ.17 ರೌಡಿಶೀಟರ್ನೋರ್ವನನ್ನು
ಬರ್ಬರವಾಗಿ ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಗರದ ಸಂಪಿಗೆಹಳ್ಳಿ ಬಳಿ ಸೋಮವಾರ ರಾತ್ರಿ ನಡೆದಿದೆ.ಭರತ್
ಅಲಿಯಾಸ್ ಕೋಗಿಲು ಭರತ್ (28) ಕೊಲೆಯಾದ ರೌಡಿಶೀಟರ್. ಸಂಪಿಗೆಹಳ್ಳಿಯ ವಿಜಯ ವೈನ್ಸ್ ಮುಂಭಾಗದಲ್ಲಿ
ಭರತ್ ನಿಂತಿದ್ದಾಗ ಬೈಕ್ನಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳು ಆತನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ
ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಕೊಲೆಯಾದ ಭರತ್ ಯಲಹಂಕ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು,
ಈತನ ವಿರುದ್ಧ ಯಲಹಂಕ, ಸಂಪಿಗೆ ಹಳ್ಳಿ ಸೇರಿದಂತೆ
ಇತರೆ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ಕೊಲೆ, ದರೋಡೆ, ಬೆದರಿಕೆಯೊಡ್ಡಿರುವ ಪ್ರಕರಣಗಳು ದಾಖಲಾಗಿವೆ.ಹಳೇ
ದ್ವೇಷದ ಹಿನ್ನೆಲೆ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,
ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 