ರೌಡಿ ಶೀಟರ್ ಸ್ಲಂ ಭರತ್ ಎನ್ ಕೌಂಟರ್ಗೆ ಬಲಿ: 47 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ
ಬೆಂಗಳೂರು, ಫೆ 27 , ರೌಡಿಶೀಟರ್ ಸ್ಲಂ ಭರತ್, ಪೊಲೀಸ್ ಎನ್ ಕೌಂಟರ್ ಗೆ ಬಲಿಯಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಹೆಸರುಘಟ್ಟ ಬಳಿ ನಡೆದಿದೆ.ರಾಜಗೋಪಾಲ್ ನಗರ ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಪಾಟೀಲ್ ಹಾಗೂ ನಂದಿನಿ ಲೇಔಟ್ ಇನ್ಸ್ ಪೆಕ್ಟರ್ ಲೋಹಿತ್ ರ ಗುಂಡೇಟಿಗೆ ಭರತ್ ಬಲಿಯಾಗಿದ್ದಾನೆ.ಇತ್ತೀಚೆಗೆ ರೌಡಿಶೀಟರ್ ಭರತ್ ನನ್ನ ಬಂಧಿಸಲು ಮುಂದಾದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಆತ ಪರಾರಿಯಾಗಿದ್ದನು. ನಂತರ ಸ್ಲಂ ಭರತ್ ಹೈದರಾಬಾದ್ ನಲ್ಲಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ದೊರೆತಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿ, ಬೆಂಗಳೂರಿಗೆ ಕರೆತರುತ್ತಿದ್ದರು. ಈ ವೇಳೆ ಸ್ಲಂ ಭರತ್ ನ ಸಹಚರರು ಭರತ್ ನನ್ನು ಕರೆತರುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಭರತ್ , ಪೊಲೀಸ್ ರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣವೇ ಬೆಂಗಳೂರು ಪೊಲೀಸರು ಎಲ್ಲೆಡೆ ಸ್ಲಂ ಭರತ್ ಬಂಧಿಸುವುದಕ್ಕೆ ಅಲರ್ಟ್ ಮಾಡಿದ್ದರು. ಹೆಸರುಘಟ್ಟ ಬಳಿ ಭರತ್ ಪರಾರಿಯಾಗುತ್ತಿದ್ದ ಮಾಹಿತಿ ತಿಳಿದ ಪೊಲೀಸರು ಆತನ ಮೇಲೆ ಫೈರಿಂಗ್ ಮಾಡಿದ್ದರು. ಲಾಂಗ್ ನಿಂದ ಹಲ್ಲೆ ಮಾಡಿ, ಪೊಲೀಸರ ಮೇಲೆ ಮೂರು ಸುತ್ತಿನ ಗುಂಡು ಹಾರಿಸಿದ್ದನು. ಆದರೆ, ಪೊಲೀಸರು ಬುಲೆಟ್ ಪ್ರೂಫ್ ಜಾಕೆಟ್ ಹಾಕಿಕೊಂಡಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ನಂತರ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಆತನ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಗೆ ಭರತ್ ನೆಲಕ್ಕೆ ಉರುಳಿದ್ದು, ತಕ್ಷಣವೇ ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.ಸ್ಲಂ ಭರತ್ ವಿರುದ್ಧ ಕೊಲೆ, ದರೋಡೆ, ಅಪಹರಣ ಸೇರಿ 47 ಪ್ರಕರಣಗಳು ದಾಖಲಾಗಿದ್ದವು. ಘಟನೆಗೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 