ಕೇಂದ್ರದಿಂದ 100 ಕೋಟಿ ರೂ. ನೆರವು ಕೇಳಿದ ಸಿಎಂ
ಬೆಂಗಳೂರು: ಪ್ರವಾಹ ಪೀಡಿತ ಕೊಡಗು ಜಿಲ್ಲೆಯ ಜನರ ಪುನರ್ವಸತಿ ಮತ್ತು ಪರಿಹಾರ ಕಾರ್ಯಕ್ಕೆ 100 ಕೋಟಿ ರೂಪಾಯಿ ನೆರವು ನೀಡುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೇಂದ್ರ ಸಕರ್ಾರವನ್ನು ಒತ್ತಾಯಿಸಿದ್ದಾರೆ.
ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿಯವರು ಕೇರಳ ರಾಜ್ಯಕ್ಕೆ 500 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ ನಾವು ಕೊಡಗಿಗೆ ಕನಿಷ್ಠ 100 ಕೋಟಿಯನ್ನಾದರೂ ಬಿಡುಗಡೆ ಮಾಡಬೇಕೆಂದು ಕೇಳುತ್ತೇವೆ. ಕೇಂದ್ರಕ್ಕೆ ಈ ಕುರಿತು ಮನವಿ ಸಲ್ಲಿಸಲಾಗುವುದು, ರಸ್ತೆ ಸಂಪರ್ಕ ಕಲ್ಪಿಸಬೇಕಾಗಿದೆ. ಅದಕ್ಕಾಗಿ ಭಾರತೀಯ ಸೇನೆ ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ ಸಹಾಯವನ್ನು ಪಡೆಯುತ್ತಿದ್ದೇವೆ ಎಂದರು.
ಪ್ರವಾಹ ಪರಿಸ್ಥಿತಿ ಕುರಿತು ಪರಾಮಶರ್ೆ ನಡೆಸಲು ಕೊಡಗಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದೇವೆ. ಇದುವರೆಗೆ ಇಲ್ಲಿ 12 ಮಂದಿ ಮೃತಪಟ್ಟಿದ್ದು 845 ಮನೆಗಳು ಹಾನಿಗೀಡಾಗಿವೆ, ಅವುಗಳಲ್ಲಿ 773 ಮನೆಗಳು ಭಾಗಶಃ ಹಾನಿಗೊಳಗಾದವವಾಗಿವೆ ಎಂದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 