ಶಾಲಾ ಕಟ್ಟಡಗಳ ದುರಸ್ತಿಗೆ 150 ಕೋಟಿ ರೂ : ಮಾದುಸ್ವಾಮಿ
ಬೆಂಗಳೂರು, ಅ 11: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸುರಿದ ಮಳೆ, ಪ್ರವಾಹದಿಂದ ರಾಜ್ಯದಲ್ಲಿ ಹತ್ತುಸಾವಿರಕ್ಕೂ ಹೆಚ್ಚು ಶಾಲಾ ಕಟ್ಟಡಗಳಿಗೆ ಹಾನಿಯಾಗಿದ್ದು ಇವುಗಳ ದುರಸ್ತಿಗೆ 500 ,ಕೋಟಿ ಪರಿಹಾರ ಬಿಡುಗಡೆಮಾಡಬೇಕೆಂದು ಶಿಕ್ಷಣ ಸಚಿವರು ಮನವಿ ಮಾಡಿದ್ದು, ಸರಕಾರ ಮೊದಲಕಂತಿನಲ್ಲಿ 150 ಕೋಟರೂಪಾಯಿ ಬಿಡುಗಡೆ ಮಾಡಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ ಮಾದುಸ್ವಾಮಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಅತಿವೃಷ್ಟಿ ಕುರಿತ ಚರ್ಚೆಯಲ್ಲಿ ಮಧ್ಯಪ್ರವೇಶ ಮಾಡಿ ಮಾತನಾಡಿದ ಅವರು, ಸಚಿವರ ಮನವಿ ಮೇರೆಗೆ ಮೊದಲ ಕಂತಿನಲ್ಲಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸರಕಾರಕ್ಕೆ ಯಾವುದೇ ಹೆದರಿಕೆಯಿಲ್ಲ. ಜಿಲ್ಲಾಡಳಿತದ ಮನವಿ ಮೇರೆಗೆ ಪರಿಹಾರ ಕಾರ್ಯಗಳಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಅಧಿವೇಶನವನ್ನು ಅಲ್ಲಿ ನಡೆಸಲು ಹೋಗಿಲ್ಲ ಎಂದು ಸಚಿವರು ಸ್ಪಷ್ಪಪಡಿಸಿದರು. ಜನತೆ ಕೋಪಕ್ಕೆ ಹೆದರಿ ಪಲಾಯನ ಮಾಡಲಾಗಿದೆ ಎಂಬ ವಾದದಲ್ಲಿ ಯಾವ ಹುರುಳಿಲ್ಲ ಎಂದು ಸಚಿವರು ಹೇಳಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 