ಮೃತ ಹಮಾಲಿ ಕುಟುಂಬಕ್ಕೆ 25 ಸಾವಿರ ರೂ. ಚೆಕ್ ವಿತರಣೆ
Rs 25,000 cheque distributed to deceased porter's family
ಮೃತ ಹಮಾಲಿ ಕುಟುಂಬಕ್ಕೆ 25 ಸಾವಿರ ರೂ. ಚೆಕ್ ವಿತರಣೆ
ಕಂಪ್ಲಿ 15: ಎಪಿಎಂಸಿಯಲ್ಲಿ ನೋಂದಾಯಿಸಿಕೊಂಡ ಸಣಾಪುರ ಗ್ರಾಮದ ಹಮಾಲಿ ವೃತ್ತಿ ಮಾಡುತ್ತಿದ್ದ ಜಡಿಯಪ್ಪ ಅಕಾಲಿಕವಾಗಿ ಸಾವನ್ನಪ್ಪಿದ್ದು, ಮೃತ ಕುಟುಂಬದ ಸದಸ್ಯರಿಗೆ ಎಪಿಎಂಸಿಯಿಂದ ನೀಡುವ ಅಂತ್ಯಕ್ರಿಯೆ ಖರ್ಚಿಗೆ 25 ಸಾವಿರ ರೂಗಳ ಚೆಕನ್ನು ಎಪಿಎಂಸಿ ಅಧ್ಯಕ್ಷರಾದ ಎನ್.ಹಬೀಬ್ ರೆಹಮಾನ್ ಅವರು ಮಂಗಳವಾರ ಕಂಪ್ಲಿ ಪಟ್ಟಣದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಶಾಸಕರಾದ ಜೆ.ಎನ್.ಗಣೇಶ್ ಅವರಿಂದ ವಿತರಿಸಿದರು. ಮೃತ ಕುಟಂಬದ ಸದಸ್ಯರಿಗೆ ಪರಿಹಾರ ಚೆಕ್ ವಿತರಿಸಿದ ನಂತರ ಶಾಸಕ ಜೆ.ಎನ್.ಗಣೇಶ ಮಾತನಾಡಿ, ಮನೆಯ ಹಿರಿಯನನ್ನು ಕಳೆದುಕೊಂಡ ಕುಟುಂಬ ಅನಾಥವಾಗಿದೆ. ಅವರ ಕುಟುಂಬಕ್ಕೆ ಎಪಿಎಂಸಿಯಿಂದ ತಾತ್ಕಾಲಿಕ ಪರಿಹಾರ ಸಿಕ್ಕಿದ್ದು, ವಿಮೆ ಹಣವು ಬರಲಿದೆ. ಅದನ್ನು ವ್ಯರ್ಥವಾಗಿ ಹಾಳು ಮಾಡದೇ ಮನೆಯ ಅಭಿವೃದ್ಧಿಗೆ ಬಳಸುವಂತೆ ಸಲಹೆ ನೀಡಿದರು. ಸಣಾಪುರ ಗ್ರಾಮದ ಹಮಾಲಿ ಕೆಲಸ ಮಾಡುತ್ತಿದ್ದ ಜಡಿಯಪ್ಪ ಅವರು ಎಪಿಎಂಸಿಯಲ್ಲಿ ನೋಂದಾಯಿತ ಹಮಾಲಿ ಕಾರ್ಮಿಕನಾಗಿದ್ದು, ಎಪಿಎಂಸಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಅಂತ್ಯಕ್ರಿಯೆಗೆ ತಾತ್ಮಕಾಲಿಕ ಪರಿಹಾರ 25ಸಾವಿರ ರೂಗಳನ್ನು ನೀಡುತ್ತಿದೆ. ಮತ್ತು ಅವರ ಕುಟುಂಬಕ್ಕೆ 5 ಲಕ್ಷ ರೂಗಳ ವಿಮಾ ಮೊತ್ತವೂ ಬರುತ್ತದೆ ಎಂದು ಎಪಿಎಂಸಿ ಅಧ್ಯಕ್ಷ ಎನ್.ಹಬೀಬ್ ರೆಹಮಾನ್ ತಿಳಿಸಿದರು. ಈ ಸಂದರ್ಭದಲ್ಲಿ ಅಕ್ಕಿ ವ್ಯಾಪಾರಸ್ತರ ಒಕ್ಕೂಟದ ಉಪಾಧ್ಯಕ್ಷ ಜಿ.ಕುಮಾರಸ್ವಾಮಿ, ನೀರು ಬಳಕೆದಾರರ ಸಂಘದ ಅಧ್ಯಕ್ಷ ಕೆ.ದೊಡ್ಡಬಸವರಾಜ, ಪುರಸಭೆ ಸದಸ್ಯರಾದ ಸಿ.ಆರ್.ಹನುಮಂತ, ತಾ.ಪಂ.ಮಾಜಿ ಸದಸ್ಯ ಕೋಟೆ ಷಣ್ಮುಖ ಮುಖಂಡರಾದ ಪಿ.ವೀರೇಶಸ್ವಾಮಿ, ಹನುಮಂತಪ್ಪ ಸೇರಿದಂತೆ ಇತರರು ಇದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 