ಸಿಡಿಲು ಬಡಿದು ಸಾವನಪ್ಪಿದ ಬಸವರಾಜ ಪರಿವಾರಕ್ಕೆ 5 ಲಕ್ಷ ರೂ ಪರಿಹಾರ ವಿತರಣೆ
Rs 5 lakh compensation distributed to Basavaraj family who died due to lightning strike
ನೇಸರಗಿ 29 : ಸಮೀಪದ ಸುತಗಟ್ಟಿ ಗ್ರಾಮದಲ್ಲಿ ದಿ. 26-3-2025 ರಂದು ಬಾರಿ ಗುಡುಗು ಸಹಿತ ಮಳೆಯಿಂದ 3 ಜನರಿಗೆ ಸಿಡಿಲು ಬಡಿದ ಪರಿಣಾಮವಾಗಿ ಸುತಗಟ್ಟಿ ಗ್ರಾಮದ ಬಸವರಾಜ ನಾಗಪ್ಪ ಸಂಗೊಳ್ಳಿ ಸ್ಥಳದಲ್ಲಿಯೇ ಮೃತಪಟ್ಟು ಇನಿಬ್ಬರಿಗೆ ತೀವ್ರ ಗಾಯಗಳಾಗಿದ್ದವು. ಅದಕ್ಕಾಗಿ ಇಂದು ಶನಿವಾರದಂದು ಸುತಗಟ್ಟಿ ಗ್ರಾಮಕ್ಕೆ ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ಬೇಟಿ ನೀಡಿ ಸರ್ಕಾರದ 5 ಲಕ್ಷ ರೂಪಾಯಿಗಳ ಚೆಕ್ನ್ನು ಮೃತರ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬೈಲಹೊಂಗಲ ತಹಸೀಲ್ದಾರ ಹಣಮಂತ ಶಿರಹಟ್ಟಿ ಮುಖಂಡ ಜಗದೀಶ ಪಾಟೀಲ ಪಿ ಡಿ ಓ ವನಜಾಕ್ಷಿ ಪಾಟೀಲ ರಾಮಪ್ಪ ಬಳಗನ್ನವರ ಲಕ್ಷ್ಮಣ ಬಳಗನ್ನವರ ಸೇರಿದಂತೆ ಮೃತರ ಕುಟುಂಬಸ್ಥರು ಗ್ರಾಮಸ್ಥರು ಉಪಸ್ಥಿತರಿದ್ದರು.
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ 