ಕೇಂದ್ರದಿಂದ 836.45 ಕೋಟಿ ರೂ.ಗಳ ಅನುದಾನ ಮಂಜೂರು: ಕಡಾಡಿ

Rs 836.45 crore grant sanctioned by Centre: Kadadi

ಮೂಡಲಗಿ 16: ಕೇಂದ್ರ ನಗರಾಭಿವೃದ್ಧಿ ಸಚಿವಾಲಯದಿಂದ ಅಮೃತ್ 2.0 ಯೋಜನೆಯಡಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಬೆಳಗಾವಿ ವಿಭಾಗದ ಜಿಲ್ಲೆಯ 32 ನಗರ ಪ್ರದೇಶಗಳಿಗೆ ಕೇಂದ್ರ ಸರ್ಕಾರದ ಶೇ 50 ರಾಜ್ಯ ಸರ್ಕಾರದ ಶೇ 40 ಹಾಗೂ ಸಾರ್ವಜನಿಕರ ವಂತಿಕೆ ಶೇ 10 ಈ ಅನುಪಾತದಲ್ಲಿ ಒಟ್ಟು 836.45 ಕೋಟಿ ರೂ.ಗಳ ಅನುದಾನ ಮಂಜೂರಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. 

ರವಿವಾರದಂದು  ಪತ್ರಿಕಾ ಹೇಳಿಕೆ ನೀಡಿದ ಅವರು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಅದರಲ್ಲೂ ವಿಶೇಷವಾಗಿ ಮೂಡಲಗಿ, ನಾಗನೂರು, ಕಲ್ಲೋಳಿ, ಅರಭಾವಿ, ಘಟಪ್ರಭಾ ಈ ಐದು ಅವಳಿ ನಗರಗಳಿಗೆ ನಿರಂತರ ನೀರು ಪೂರೈಸುವ ಉದ್ದೇಶದಿಂದ 165 ಕೋಟಿ ರೂಪಾಯಿಗಳ ಅನುದಾನ ಮಂಜೂರಾಗಿದೆ. ಈಗಾಗಲೇ ಜಿಲ್ಲೆಯ ಹಲವು ಕಡೆ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದ್ದು, ಅತಿ ಶೀಘ್ರದಲ್ಲಿ ಉಳಿದೆಲ್ಲ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ. 

  ಕಾಮಗಾರಿಗಳಿಗೆ ಅನುದಾನ ಮಂಜೂರಿ ಮಾಡಿದ ನೀಡಿದ ಕೇಂದ್ರ ನಗರ ವ್ಯವಹಾರಗಳ ಸಚಿವರಾದ ಮನೋಹರ್ ಲಾಲ್ ಖಟ್ಟರ್ ಹಾಗೂ ಕರ್ನಾಟಕ ರಾಜ್ಯ ನಗರಾಭಿವೃದ್ಧಿ ಸಚಿವರಾದ  ಭೈರತಿ ಸುರೇಶ್ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಸಂಸದ ಈರಣ್ಣ ಕಡಾಡಿ ಹೇಳಿದರು.