ನಿಯಮ ಉಲ್ಲಂಘನೆ: ಬೀಜ ಮಾರಾಟ ಪರವಾನಿಗೆ ಅಮಾನತು
ಹಾವೇರಿ, ಏ.21,ಬೀಜ ಅಧಿನಿಯಮ ಉಲ್ಲಂಘನೆ ಮಾಡಿದ್ದ ಕಾರಣಕ್ಕಾಗಿ ಬೀಜ ಮಾರಾಟ ಮಾಡುತ್ತಿದ್ದ ಖಾಸಗಿ ಕಂಪೆನಿಯ ಪರವಾನಿಗೆಯನ್ನು ಅಮಾನತು ಮಾಡಿ ಆದೇಶಿಸಲಾಗಿದೆ.ರಾಣೆಬೆನ್ನೂರಿನ "ವೆಂಕಟೇಶ್ವರ ಆಗ್ರೋ ಟ್ರೇಡರ್ಸ್" ಖಾಸಗಿ ಕಂಪೆನಿಯಾಗಿದ್ದು ಈ ಖಾಸಗಿ ಟ್ರೇಡರ್ಸ್ ಸುಮಾರು 12 ವರ್ಷಗಳಿಂದ ರೈತರ ಬೀಜ ಮಾರಾಟ ಮಾಡಿಕೊಂಡು ಬಂದಿದೆ.ಇತ್ತೀಚೆಗೆ ರಾಣೆಬೆನ್ನೂರಿನಲ್ಲಿ ಕಳಪೆ ಬೀಜ ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನ ಆಧಾರದ ಮೇಲೆ ಏಪ್ರಿಲ್ 20 ರಂದು ಈ ಟ್ರೆಡರ್ಸ್ ಮಳಿಗೆಗೆ ವಿಚಕ್ಷಣಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.ಹಾವೇರಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ಇವರ ನೇತೃತ್ವದ ವಿಚಕ್ಷಣಾ ತಂಡ ಮಾರಾಟ ಕೇಂದ್ರಕ್ಕೆ ಭೇಟಿ ನೀಡಿದಾಗ ಸಂಶಯಾಸ್ಪದ ಬಿತ್ತನೆ ಬೀಜ ಪ್ಯಾಕಿಂಗ್ ಮಾಡುವ ಉಪಕರಣಗಳು ಲಭ್ಯವಾಗಿದ್ದವು. ಬಿಡಿ ಬಿತ್ತನೆ ಬೀಜಗಳನ್ನು ಮಾರಾಟ ಮಾಡುವ ದುರುದ್ದೇಶದ ಅನುಮಾನ ಕಂಡುಬಂದಿದ್ದು ಇದು ಬೀಜ ಅಧಿನಿಯಮಗಳ ಉಲ್ಲಂಘನೆಯಾಗಿದೆ. ಆದ್ದರಿಂದ ರಾಣೆಬೆನ್ನೂರಿನ "ವೆಂಕಟೇಶ್ವರ ಆಗ್ರೋ ಟ್ರೇಡರ್ಸ್" ಪರವಾನಿಗೆಯನ್ನು ಅಮಾನತು ಮಾಡಿ,ಸಮರ್ಪಕ ಉತ್ತರ ಸ್ಪಷ್ಟ ಕಾರಣ ನೀಡುವಂತೆ ಷೋಕಾಸ್ ನೀಡಲಾಗಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 