ಏಳು ದಿನಗಳ ಎನ್ಎಸ್ಎಸ್ ಶಿಬಿರಕ್ಕೆ ಚಾಲನೆ
ಲೋಕದರ್ಶನ ವರದಿ
ಬೆಳಗಾವಿ,16 : ಸ್ವಚ್ಛತೆ, ಗ್ರಾಮಗಳ ಶುಚಿತ್ವ, ಗ್ರಾಮೀಣ ಅಭಿವೃದ್ಧಿಗಳು ಎನ್ಎಸ್ಎಸ್ ಘಟಕದ ಪರಿಕಲ್ಪನೆಗಳಾಗಿದ್ದು, ಪ್ರತಿ ಗ್ರಾಮಗಳ ಅಂತಹ ಸಾರ್ವಜನಿಕ ಸಹಕಾರಿ ಘಟಕಗಳಿಗೆ ಕೈಜೋಡಿಸುವ ಅಗತ್ಯತೆ ಇದೆ ಎಂದು ಬಿಜೆಪಿಯ ಯುವ ಮುಖಂಡ ಮಾರುತಿ ಅಷ್ಟಗಿ ಹೇಳಿದರು.
ಅವರು ಇಂದು ಮುಚ್ಚಂಡಿಯಲ್ಲಿ ಕೆ ಎಲ್ ಇ ಜಿ.ಎ. ಪದವಿಪೂರ್ವ ಕಾಲೇಜಿನ ಎನ್ ಎಸ್ ಎಸ್ ವಿಭಾಗದ ಏಳು ದಿನಗಳ ಶಿಬಿರದ ಮುಖ್ಯ ಅತಿಥಿಗಳಾಗಿ ಆಗಮಿಸಿ, ಗ್ರಾಮಮಟ್ಟದಲ್ಲಿ ತಳಹದಿಯಾಗಲು ಎನ್ಎಸ್ಎಸ್ ಘಟಕಗಳು ಸೇವೆಗೈಯುತ್ತಿರುವುದು ಸ್ವಚ್ಛ ಭಾರತ ಅಭಿಯಾನಕ್ಕೆ ಬಲ ತಂದಿವೆ ಎಂದರು.
ಗ್ರಾ.ಪಂ. ಅಧ್ಯಕ್ಷ ಅಶೋಕ ಮೋದಗೇಕರ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾ. ಆರ್.ಎಸ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಜಿ.ವಿ.ಮಠದ ಅತಿಥಿ ಉಪನ್ಯಾಸ ನೀಡಿದರು.
ಪಿಯುಸಿ ವಿಭಾಗದ 50 ವಿದ್ಯಾಥರ್ಿಗಳು ಈ ಏಳು ದಿನಗಳ ಕಾರ್ಯಕ್ರಮದಲ್ಲಿ ರಸ್ತೆ, ಗಟಾರು, ಮೈದಾನ ಶುಚಿತ್ವ, ಸಸಿ ನೆಡುವಿಕೆ, ಇಂಗು ಗುಂಡಿಗಳ ನಿಮರ್ಾಣದ ಯೋಜನೆಯನ್ನು ಹಮ್ಮಿಕೊಂಡು ಚಾಲನೆ ನೀಡಿದರು.ಎನ್ಎಸ್ಎಸ್ ಬಾಗಪ್ಪ ಮಾರದ, ಉಪನ್ಯಾಸಕ ಧನಾಜಿ ಪವಾರ ಹಾಗೂ ಗ್ರಾಮದ ಹಿರಿಯ ಮುಖಂಡರು ಪಾಲ್ಗೊಂಡಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 