ಗ್ರಾಮೀಣ ರೈತರು ಕೃಷಿಯೊಂದಿಗೆ ಪಶುಸಂಗೋಪನೆ ಮಾಡಿ ಉತ್ತಮ ಲಾಭ ಗಳಿಸಿ: ಆಶಾ ಐಹೊಳೆ
ಲೋಕದರ್ಶನ ವರದಿ
ಮೋಳೆ 17: ಗ್ರಾಮೀಣ ಭಾಗದ ಆರ್ಥಿಕತೆಯಲ್ಲಿ ಹಾಲು ಉತ್ಪಾದನೆ ಮತ್ತು ಪಶುಸಂಗೋಪಣೆಯಂತಹ ಕೃಷಿಯೇತರ ಚಟುವಟಿಕೆಗಳಿಗೆ ಬಹಳಷ್ಟು ಅವಕಾಶಗಳಿವೆ. ಹಾಲು ಉತ್ಪಾದನೆಯಲ್ಲಿ ಹೆಚ್ಚು ಹಾಲು ಕರೆಯುವ ಜಾನುವಾರಗಳ ಸಾಗಣಿಕೆಯಿಂದ ಕೃಷಿಯೊಂದಿಗೆ ಉತ್ತಮ ಆದಾಯ ಗಳಿಸಬಹುದಾಗಿದೆ. ಗ್ರಾಮೀಣ ಭಾಗದ ರೈತರು ಕೃಷಿ ಚಟುವಟಿಕೆಗಳ ಜೊತೆಗೆ ಹೈನುಗಾರಿಯನ್ನು ಸಹ ಮಾಡಿ ಆರ್ಥಿಕ ಸದೃಢರಾಗಬಹುದು ಎಂದು ಬೆಳಗಾವಿ ಜಿಲ್ಲಾ ಪಂಚಾಯತ ಅಧ್ಯಕ್ಷ ಆಶಾ ಐಹೊಳೆ ಹೇಳಿದರು.
ಇಂದು ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಕೆಆಯ್ಆರ್ಡಿಎಲ್ ಇಲಾಖೆಯ ವತಿಯಿಂದ 38 ಲಕ್ಷ ರೂ ವೆಚ್ಚದ ಪುಶುಚಿಕ್ಸಾಲಯದ ನೂತನ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಈ ಪುಶು ಚಿಕ್ಸಾಲಯದ ನೂತನ ಕಟ್ಟಡಕ್ಕೆ ರಾಜ್ಯ ಸರ್ಕಾರದ ಆರ್.ಐ.ಡಿ.ಎಫ್. ಯೋಜನೆಯಲ್ಲಿ ರೂ. 38 ಲಕ್ಷಗಳು ಮಂಜೂರಾಗಿದ್ದು, ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದೆ. ಕಾಮಾಗಾರಿ ಉತ್ತಮ ಹಾಗೂ ವೇಳೆಯಲ್ಲಿ ಪೂರ್ಣಗೊಳಿಸುವ ಉದ್ದೇಶದಿಂದ ಲ್ಯಾಂಡ ಆರ್ಮಿಯವರಿಗೆ ಕಾಮಗಾರಿಯನ್ನು ನೀಡಲಾಗಿದೆ ಎಂದರು.
ಕೆಆಯ್ಆರ್ಡಿಎಲ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎ.ಜಿ.ಷಣ್ಮುಕಪ್ಪ, ಗ್ರಾಮ ಪಂಚಾಯತಿ ಅಧ್ಯಕ್ಷ ಇಕ್ಬಾಲ ಕನವಾಡೆ, ಉಪಾಧ್ಯಕ್ಷೆ ಸುನಂದಾ ನಾಂದನಿ,
ಕಾಗವಾಡೆ, ತಾ.ಪಂ. ಸದಸ್ಯ ಶಶಿಕಾಂತ ಕಾಂಬಳೆ, ಮುಖಂಡರಾದ ರಾಮಗೌಡಾ ಪಾಟೀಲ, ದೀಪಕ ಪಾಟೀಲ, ವಿಜಯ ಅಕಿವಾಟೆ, ಶಿವಾನಂದ ಪಾಟೀಲ, ಭೀಮು ಅಕಿವಾಟೆ, ರಾಜೇಂದ್ರ ಚೌಗುಲೆ,
ಪ್ರಕಾಶ ಹೇಮಗೀರೆ, ಯಶವಂತ ಪಶು ಇಲಾಖೆ ಅಧಿಕಾರಿಗಳಾದ ಡಾ. ಭುಜಬಲಿ ಐಗಳಿ, ಡಾ. ಸುರೇಶ ಕದ್ದು, ಡಾ. ರಮೇಶ ಮಿರಜೆ, ಡಾ. ವ್ಹಾಯ್. ಡಿ. ಅನಪಾಲ ಮತ್ತು ಅನೇಕ ಗಣ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪದ್ಮಣ್ಣ ಕುಂಬಾರ ಉಪಸ್ಥಿತರಿದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 