ವಿವೇಕಾನಂದರ ಆದರ್ಶ ಅನುಸರಿಸಿ ಚಿತ್ರಕಲಾ ಶಿಕ್ಷಕರಾದ ಎಸ್ ದ್ವಾರಕೀಶ್ ರೆಡ್ಡಿ

ವಿವೇಕಾನಂದರ ಆದರ್ಶ ಅನುಸರಿಸಿ ಚಿತ್ರಕಲಾ ಶಿಕ್ಷಕರಾದ ಎಸ್ ದ್ವಾರಕೀಶ್ ರೆಡ್ಡಿ S. Dwarakish Reddy, an art teacher following the example of Vivekananda

 ಹೂವಿನ ಹಡಗಲಿ 13: ಸ್ವಾಮಿ ವಿವೇಕಾನಂದರ ಆದರ್ಶ ಅನುಸರಿಸಿ ಎಂದು ಚಿತ್ರಕಲಾ ಶಿಕ್ಷಕರಾದ ಎಸ್ ದ್ವಾರಕೀಶ್ ರೆಡ್ಡಿ ಹೇಳಿದರು.ಪಟ್ಟಣದ ಸರ್ಕಾರಿ ಅನುದಾನಿತ ತುಂಗಭದ್ರಾ ಪ್ರೌಢಶಾಲೆಯಲ್ಲಿ ಸೋಮವಾರ ರಾಷ್ಟ್ರೀಯ ಯುವ ದಿನ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆಯಲ್ಲಿ  ಮಾತನಾಡಿದರು.ಗುರು ರಾಮಕೃಷ್ಣ ಪರಮಹಂಸರಿಂದ ಪ್ರಭಾವಿತರಾಗಿ ಸಮಾಜದಲ್ಲಿ ಶಾಂತಿ ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ದೇಶದುದ್ದಕ್ಕೂ ಏಕಾಂಗಿಯಾಗಿ ಪರ್ಯಟನೆ ನಡೆಸಿದ್ದನ್ನು ವಿವರಿಸಿದರು.ಮುಖ್ಯ ಗುರು ಸುರೇಶ ಅಂಗಡಿ ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಪಾದಯಾತ್ರೆ ಮೂಲಕ ಜನ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು ಎಂದರು.ಶಿಕ್ಷಕರಾದ ಬಸಪ್ಪ ಕೆ ಆನಂದ್ ಜಿ ಗೀತಾ ಪಿ ಎಂ ಸಂಗಮೇಶ ಸುಂಕದ ಪ್ರಸಾದ್ ಸಂತೋಷ್ ಕುಮಾರ್ ಎಸ್ ರಾಕೇಶ್ ಇತರರು ಇದ್ದರು.