ದೆಹಲಿಗೆ ಎಸ್.ಎನ್. ಶ್ರೀವಾತ್ಸವ ಹೊಸ ಪೊಲೀಸ್ ಆಯುಕ್ತ
ನವದೆಹಲಿ, ಫೆ ೨೮ : ಹಿರಿಯ ಐಪಿಎಸ್ ಅಧಿಕಾರಿ ಎಸ್.ಎನ್. ಶ್ರೀವಾಸ್ತವ ಅವರನ್ನು ದೆಹಲಿ ಪೊಲೀಸ್ ಆಯುಕ್ತರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ. ಪ್ರಸ್ತುತ ನಗರ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಅಮೂಲ್ಯ ಪಟ್ನಾಯಕ್ ಎತ್ತಂಗಡಿ ಮಾಡಲಾಗಿದ್ದು, ಅವರು ಶನಿವಾರ ತಮ್ಮ ಹುದ್ದೆಯನ್ನು ತ್ಯಜಿಸಲಿದ್ದಾರೆ.
ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದ ಘರ್ಷಣೆಗಳನ್ನು ಹತೋಟಿಗೆ ತರುವಲ್ಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಿಕ್ ಅವರ ವೈಫಲ್ಯದ ಬಗ್ಗೆ ತೀವ್ರ ಟೀಕೆಗಳು ಕೇಳಿ ಬಂದ ಹಿನ್ನಲೆಯಲ್ಲಿ ಪೊಲೀಸ್ ಆಯುಕ್ತ ಸ್ಥಾನದಿಂದ ಅವರನ್ನು ಎತ್ತಂಗಡಿ ಮಾಡಲಾಗಿದೆ.
ಸಿಆರ್ಪಿಎಫ್ನಿಂದ ಕರೆಸಿಕೊಂಡು ವಿಶೇಷ ಆಯುಕ್ತರನ್ನಾಗಿ ( ಶಾಂತಿ ಭದ್ರತೆ ) ಶ್ರೀವಾತ್ಸವ ಅವರನ್ನು ನೇಮಿಸಿದ್ದ ಕೇಂದ್ರ ಗೃಹ ಸಚಿವಾಲಯ, ಕೆಲವೇ ದಿನಗಳಲ್ಲಿ ದೆಹಲಿ ನಗರ ಪೊಲೀಸ್ ಮುಖ್ಯಸ್ಥರ ಹುದ್ದೆಗೆ ಬಡ್ತಿ ಕಲ್ಪಿಸಿದೆ. ಮತ್ತೊಂದೆಡೆ ದೆಹಲಿ ಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ ೩೮ಕ್ಕೆ ಏರಿಕೆಯಾಗಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 