ಎಸ್ಸಿ ಜನಾಂಗದವರಿಗೆ ಶೇ. 15ರಷ್ಟು ಮೀಸಲಾತಿ ನೀಡಲು ಒತ್ತಾಯ
ಲೋಕದರ್ಶನ ವರದಿ
ಬೆಳಗಾವಿ : ಮಹಾನಗರ ಪಾಲಿಕೆಗೆ ನಗರ ಸೇವಕರ ಮೀಸಲಾತಿಗೆ ಸಂಬಂಧಿಸಿದಂತೆ ಎಸ್.ಸಿ ಜನಾಂಗದವರಿಗೆ ಶೇ.15ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ಶುಕ್ರವಾರ ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ಜಿಲ್ಲಾಧಿಕಾರಿ ಜಿಯಾವುಲ್ಲಾ ಅವರಿಗೆ ಮನವಿ ಸಲ್ಲಿಸಿದರು.
ಶುಕ್ರವಾರ ದಿನದಂದು ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಈ ಕುರಿತು ಮನವಿಯೊಮದನ್ನು ಸಲ್ಲಿಸಿ, ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಗೇಜೆಟ್ ಘೋಷಣೆ ಮಾಡಿದ್ದು ಅದರಲ್ಲಿ ದಲಿತ ಸಮುದಾಯಕ್ಕೆ ಅಂದರೆ ಎಸ್.ಸಿ ಜನಾಂಗದವರಿಗೆ ಅನ್ಯಾಯವಾಗಿದೆ. ಮಹಾನಗರ ಪಾಲಿಕೆಯ ಒಟ್ಟು 58 ವಾಡರ್ುಗಳಿದ್ದು ಎಸ್.ಸಿ ಜನಾಂಗದವರಿಗೆ 5 ಸ್ಥಾನಗಳನ್ನು ಮೀಸಲಾಗಿಟ್ಟಿದ್ದಾರೆ.
ಸಂವಿಧಾನಾತ್ಮಕವಾಗಿ ಶೇ.15 ರಷ್ಟು ಮೀಸಲಾತಿ ಇದ್ದು ನಮಗೆ ಇನ್ನೂ 3 ಸ್ಥಾನಗಳು ಮೀಸಲಾತಿ ಕಡಿಮೆಯಾಗಿದ್ದು ನಮ್ಮ ಜನಾಂಗಕ್ಕೆ ಸಿಗಬೇಕಾದ ಶೇಕಡಾವಾರು ಮೀಸಲಾತಿ ನೀಡುವಂತೆ ಮನವಿಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಹಿಂದೆ ಸಿಕ್ಕ ಮೀಸಲಾತಿ ವಾಡರ್ುಗಳಲ್ಲಿ ಪನಃ ಕೊಡದೇ ಹೊಸ ವಾಡರ್ುಗಳಿಗೆ ಮೀಸಲಾತಿ ನಿಗದಿ ಪಡಿಸಬೇಕು ಆಗ್ರಹಿಸಿದ್ದಾರೆ.
ಈ ಪ್ರತಿಭಟನೆಯಲ್ಲಿ ಯಲ್ಲಪ್ಪಾ ಎಚ್. ಸಂಕಟಗೋಳಮಹಾದೇವ ಕೊಲಕಾರ, ಕವಿತಾ ಸಂಕಪಗಳ, ಬಚಲರಿ, ಶೀವಶಂಕರ, ಸದಾಶಿವ ಸಂಕಟಗೋಳ ಭಾಗವಹಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 