ನಾಮಪತ್ರ ತಿರಸ್ಕಾರ, ಸುಪ್ರೀಂ ಮೊರೆ ಹೋದ ಎಸ್ ಪಿ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್
ನವದೆಹಲಿ, ಮೇ 6ವಾರಣಾಸಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ತಮ್ಮ ನಾಮಪತ್ರ ತಿರಸ್ಕರಿಸಿರುವ ಕ್ರಮದ ವಿರುದ್ದ ಗಡಿಭದ್ರತಾ ಪಡೆಯಿಂದ ವಜಾಗೊಂಡಿರುವ ಕಾನ್ಸ್ ಟೇಬಲ್ ತೇಜ್ ಬಹದ್ದೂರ್ ಸಿಂಗ್ ಸೋಮವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ತೇಜ್ ಬಹದ್ದೂರ್ ಸಿಂಗ್ ಅವರ ಅರ್ಜಿಯನ್ನು ಅಪೆಕ್ಸ್ ನ್ಯಾಯಾಲಯ ಇನ್ನೂ ಕೈಗೆತ್ತಿಕೊಳ್ಳಬೇಕಿದೆ
ವಜಾಗೊಂಡಿರುವ ಬಿಎಸ್ ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಅವರ ಪರವಾಗಿ ವಕೀಲ ಪ್ರಶಾಂತ್ ಭೂಷಣ್ ಹಾಜರಾಗುತ್ತಿದ್ದಾರೆ. ಪ್ರಕರಣವನ್ನುತುರ್ತಾಗಿ ಪಟ್ಟಿಮಾಡುವಂತೆ ನ್ಯಾಯಾಲಯದ ರಿಜಿಸ್ಟಾರ್ ಅವರ ಮುಂದೆ ಪ್ರಶಾಂತ್ ಭೂಷಣ್ ಪ್ರಸ್ತಾಪಿಸಲಿದ್ದಾರೆ. ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿನರೇಂದ್ರ ಮೋದಿ ಅವರ ವಿರುದ್ಧ ಸಮಾಜವಾದಿ ಪಕ್ಷದಅಭ್ಯರ್ಥಿಯಾಗಿ ತೇಜ್ ಬಹದ್ದೂರ್ ಯಾದವ್ ಅವರು ಸಲ್ಲಿಸಿದ್ದ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಚುನಾವಣಾಧಿಕಾರಿಯ ಈ ಕ್ರಮವನ್ನು ಯಾದವ್ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 