ನಾಮಪತ್ರ ತಿರಸ್ಕಾರ, ಸುಪ್ರೀಂ ಮೊರೆ ಹೋದ ಎಸ್ ಪಿ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್
ನವದೆಹಲಿ, ಮೇ 6ವಾರಣಾಸಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ತಮ್ಮ ನಾಮಪತ್ರ ತಿರಸ್ಕರಿಸಿರುವ ಕ್ರಮದ ವಿರುದ್ದ ಗಡಿಭದ್ರತಾ ಪಡೆಯಿಂದ ವಜಾಗೊಂಡಿರುವ ಕಾನ್ಸ್ ಟೇಬಲ್ ತೇಜ್ ಬಹದ್ದೂರ್ ಸಿಂಗ್ ಸೋಮವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ತೇಜ್ ಬಹದ್ದೂರ್ ಸಿಂಗ್ ಅವರ ಅರ್ಜಿಯನ್ನು ಅಪೆಕ್ಸ್ ನ್ಯಾಯಾಲಯ ಇನ್ನೂ ಕೈಗೆತ್ತಿಕೊಳ್ಳಬೇಕಿದೆ
ವಜಾಗೊಂಡಿರುವ ಬಿಎಸ್ ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಅವರ ಪರವಾಗಿ ವಕೀಲ ಪ್ರಶಾಂತ್ ಭೂಷಣ್ ಹಾಜರಾಗುತ್ತಿದ್ದಾರೆ. ಪ್ರಕರಣವನ್ನುತುರ್ತಾಗಿ ಪಟ್ಟಿಮಾಡುವಂತೆ ನ್ಯಾಯಾಲಯದ ರಿಜಿಸ್ಟಾರ್ ಅವರ ಮುಂದೆ ಪ್ರಶಾಂತ್ ಭೂಷಣ್ ಪ್ರಸ್ತಾಪಿಸಲಿದ್ದಾರೆ. ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿನರೇಂದ್ರ ಮೋದಿ ಅವರ ವಿರುದ್ಧ ಸಮಾಜವಾದಿ ಪಕ್ಷದಅಭ್ಯರ್ಥಿಯಾಗಿ ತೇಜ್ ಬಹದ್ದೂರ್ ಯಾದವ್ ಅವರು ಸಲ್ಲಿಸಿದ್ದ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಚುನಾವಣಾಧಿಕಾರಿಯ ಈ ಕ್ರಮವನ್ನು ಯಾದವ್ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 