ವಕ್ಫ್ ತಿದ್ದುಪಡಿ ಮಸೂದೆ ಖಂಡಿಸಿ ಎಸ್ಡಿಪಿಐ ಪ್ರತಿಭಟನೆ
SDPI protests against Waqf Amendment Bill
ವಕ್ಫ್ ತಿದ್ದುಪಡಿ ಮಸೂದೆ ಖಂಡಿಸಿ ಎಸ್ಡಿಪಿಐ ಪ್ರತಿಭಟನೆ
ದೇವರಹಿಪ್ಪರಗಿ:ಕೇಂದ್ರ ಸರ್ಕಾರ ಕೈಗೊಂಡಿರುವ ವಕ್ಫ್ ಬೋರ್ಡ್ ಮಸೂದೆ ತಿದ್ದುಪಡಿ ಹಾಗೂ ರಾಜ್ಯ ಸಭೆಯಲ್ಲಿ ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತಾಲೂಕು ಘಟಕದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಅಂಜುಮನ್ ಸಂಸ್ಥೆಯ ಉಪಾಧ್ಯಕ್ಷ ಮಹಮ್ಮದ್ ರಫೀಕ್ ಪಾನಪುರೋಶ್ ಎಸ್.ಡಿ.ಪಿ.ಐ ತಾಲೂಕು ಅಧ್ಯಕ್ಷ ಅಜೀಜ ಮರೋಳ ಮಾತನಾಡಿ, ರಾಜ್ಯ ಸಭೆಯಲ್ಲಿ ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆಯನ್ನು ಕಟುವಾಗಿ ವಿರೋಧಿಸುತ್ತೇವೆ. ಈ ಮಸೂದೆ ಪಕ್ಷಪಾತದಿಂದ ಕೂಡಿದ್ದು, ಅಸಾಂವಿಧಾನಿಕ ಮತ್ತು ಮುಸ್ಲಿಂ ವಿರೋಧಿಯಾಗಿದೆ. ಮುಸ್ಲಿಂ ಸಮುದಾಯದ ಸಂಘಟನೆಗಳ, ಜನ ಪ್ರತಿನಿಧಿಗಳ ಅಭಿಪ್ರಾಯವನ್ನು ಪರಿಗಣಿಸದೆ, ಜನರ ಹಿತಾಸಕ್ತಿಗೆ ಕೇಂದ್ರ ಸರ್ಕಾರ ಧಕ್ಕೆ ತರುತ್ತಿದೆ. ಎಸ್.ಡಿ.ಪಿ.ಐ ಈ ಮಸೂದೆಯನ್ನು ತಿರಸ್ಕರಿಸಲು ಭಾರತಿಯ ಜನತೆಗೆ ಕರೆ ನೀಡುತ್ತದೆ ಎಂದು ಹೇಳಿದರು.
ಅಂಜುಮನ್ ತಾಲೂಕು ಘಟಕದ ಅಧ್ಯಕ್ಷ ಮಹಬೂಬ ಹುಂಡೆಕಾರ, ಇಕ್ಬಾಲ್ ಬಿಜಾಪುರ, ಶಬ್ಬೀರ ಹತ್ತರಕಿಹಾಳ, ಜಾವೀದ್ ದಿಡ್ಡಿ, ಶನವಾಜುಮಹ್ಮದ್ ಮರೋಳ, ಮಿಪಾಸಾ ಶಿರೋಳ, ಇಸ್ಮಾಯಿಲ ಮರೋಳ ಸೇರಿದಂತೆ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 