ದೇಶದ್ರೋಹ ಪ್ರಕರಣ: ನಾಳೆ ಬೆಂಗಳೂರಿನಲ್ಲಿ ಮಹತ್ವದ ಸಭೆ
ದಾವಣಗೆರೆ, ಫೆ.22: ದೇಶದ್ರೋಹಿ ಘೋಷಣೆಯ ಹಿಂದೆ ದೊಡ್ಡ ಷಡ್ಯಂತ್ರವೇ ಇದೆ. ಇದರ ಹಿಂದೆ ಹಲವು ಸಂಘಟನೆಗಳು , ಹಲವು ಜನರು ಇದ್ದಾರೆ. ಈ ಬಗ್ಗೆ ನಾಳೆ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ನಡೆಯುವ ಸಭೆಯಲ್ಲಿ ಈ ಷಡ್ಯಂತ್ರದ ಬಗ್ಗೆ ತನಿಖೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ದೇಶದ್ರೋಹಿಗಳಿಗೆ ಬೆಂಬಲ ನೀಡುವವರ ವಿಚಾರದ ಬಗ್ಗೆಯೂ ತನಿಖೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.ಕಲಬುರಗಿಯಲ್ಲಿ ಎಐಎಂಐಎಂ ನಾಯಕ ವಾರಿಸ್ ಪಠಾಣ್ ವಿರುದ್ಧ ದೂರು ದಾಖಲಿಸಲು ವಿಳಂಬದ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಈಗಾಗಲೇ ಕಲಬುರಗಿ ಪೊಲೀಸ್ ಆಯುಕ್ತರ ಜೊತೆ ಈ ಬಗ್ಗೆ ಮಾತನಾಡಿದ್ದೇನೆ. ಪಠಾಣ್ ವಿರುದ್ಧವೂ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.ಶಾಸಕರ ಭವನಕ್ಕೆ ಮಾಧ್ಯಮ ನಿರ್ಬಂಧ ವಿಚಾರದ ಬಗ್ಗೆ ಹೇಳಿದ ಅವರು, ಅದು ಸ್ಪೀಕರ್ ವ್ಯಾಪ್ತಿಯಲ್ಲಿದೆ. ಈ ಬಗ್ಗೆ ತಾವು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಜಾರಿಕೊಂಡರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 