ಎಸ್ಎಫ್ಐ 18ನೇ ವಿದ್ಯಾರ್ಥಿಗಳ ರಾಷ್ಟ್ರೀಯ ಸಮ್ಮೇಳನ ಪೋಸ್ಟರ್ ಬಿಡುಗಡೆ
SFI 18th National Students' Conference Poster Released
ರಾಣೇಬೆನ್ನೂರ 19 : "ಶಿಕ್ಷಣ ನಮ್ಮ ಹಕ್ಕು. ಏಕತೆಯೇ ಮಾರ್ಗ, ವೈವಿಧ್ಯತೆಯೇ ಶಕ್ತಿಗಾಗಿ" ಎಂಬ ಪ್ರಮುಖ ಘೋಷಣೆಯಡಿಯಲ್ಲಿ ನಡೆಯುವ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) 18ನೇ ರಾಷ್ಟ್ರೀಯ ಸಮ್ಮೇಳನದ ಪೋಸ್ಟರ್ ಗಳನ್ನು ರಾಣೇಬೆನ್ನೂರ ತಾಲ್ಲೂಕ ಸಮಿತಿ ಕಾರ್ಯಕರ್ತರು ಬಿಡುಗಡೆ ಮಾಡಿದರು.
"ಸರ್ವರಿಗೂ ಶಿಕ್ಷಣ ಮತ್ತು ಉದ್ಯೋಗದ ಮೂಲಭೂತ ಹಕ್ಕಿಗಾಗಿ" ನಿರಂತರ ಚಳುವಳಿಯನ್ನು ಸಂಘಟಿಸುತ್ತ ಬರುತ್ತಿದೆ. ದೇಶದ ಐಕ್ಯತೆ, ಸಮಗ್ರತೆ ಹಾಗೂ ಸೌಹಾರ್ದತೆಯನ್ನು ಗಟ್ಟಿಗೊಳಿಸುವುದರ ಜೊತೆಗೆ ಇಂದು ಶಿಕ್ಷಣ ಕ್ಷೇತ್ರದ ಖಾಸಗೀಕರಣ, ವ್ಯಾಪಾರೀಕರಣ, ಭ್ರಷ್ಟಾಚಾರ, ಖಾಸಗಿ - ವಿದೇಶಿ ವಿಶ್ವವಿದ್ಯಾಲಯಗಳು ದೇಶಕ್ಕೆ ಆಗಮಿಸುತ್ತಿರುವುದನ್ನು ವಿರೋಧಿಸಿ, ವಿದ್ಯಾರ್ಥಿಗಳು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರ ಚಳುವಳಿಯನ್ನು ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರವ್ಯಾಪಿಯಾಗಿ ಕಾರ್ಯಕ್ರಮಗಳನ್ನು ಮಾಡುತ್ತದೆ.
ಕಳೆದ 50 ವರ್ಷಗಳಿಂದ ಶಿಕ್ಷಣದ ಉಳಿವಿಗಾಗಿ, ವಿದ್ಯಾರ್ಥಿಗಳ ಏಳ್ಗೆಗಾಗಿ ನಿರಂತರ ಹೋರಾಟ, ಕಾರ್ಯಕ್ರಮ, ಸಂವಾದ, ವಿಚಾರ ಸಂಕಿರಣ ಕಾರ್ಯಕ್ರಮಗಳನ್ನು ನಡೆಸುತ್ತಾ ವಿದ್ಯಾರ್ಥಿಗಳ ಆಶಾಕಿರಣವಾಗಿ ಕೆಲಸ ಮಾಡುತ್ತಿರುವ ಎಸ್ಎಫ್ಐ ಸಂಘಟನೆಯ 18ನೇ ಅಖಿಲ ಭಾರತ ಸಮ್ಮೇಳನವು 27,28,29,30 ಜೂನ್ 2025 ನಾಲ್ಕು ದಿನಗಳ ಕಾಲ ಕೇರಳ ರಾಜ್ಯದ ಕೋಚಿಕೊಡ್ ನಗರದಲ್ಲಿ ನಡೆಯಲಿದೆ. ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಶಿಕ್ಷಣ ತಜ್ಞರು, ಪ್ರಗತಿಪರ ಚಿಂತಕರು, ಬುದ್ಧಿಜೀವಿಗಳು ದೇಶದ ವಿವಿಧ ಭಾಗಗಳಿಂದ ಒಂದು ಸಾವಿರಕ್ಕೂ ಅಧಿಕ ವಿದ್ಯಾರ್ಥಿ ಪ್ರತಿನಿಧಿಗಳು, ವಿದ್ಯಾರ್ಥಿ ಚಳುವಳಿಯಲ್ಲಿರುವ, ನಾಯಕರು ಪಾಲ್ಗೊಳ್ಳುತ್ತಿದ್ದು ಶಿಕ್ಷಣ ಮತ್ತು ಉದ್ಯೋಗ ಸೇರಿದಂತೆ ಹಲವಾರು ಕ್ಷೇತ್ರಗಳ ಕುರಿತು, ರಾಷ್ಟ್ರವನ್ನು ತಲ್ಲಣಗೊಳಿಸುತ್ತಿರುವ ಭಯೋತ್ಪಾದನೆ, ಕೋಮುವಾದ, ಭ್ರಷ್ಠಾಚಾರ, ನಿರುದ್ಯೋಗ, ಬಡತನ ಸೇರಿದಂತೆ ಇನ್ನು ಹಲವಾರು ವಿಷಯಗಳ ಕುರಿತು ವಿಚಾರ ಸಂಕಿರಣಗಳು, ಚರ್ಚಾ ಗೋಷ್ಟಿಗಳು ನಡಿಯಲಿವೆ ಎಂದು ಎಸ್ಎಫ್ಐ ತಾಲೂಕು ಸಹಕಾರ್ಯದರ್ಶಿ ಕೃಷ್ಣ ನಾಯಕ ತಿಳಿಸಿದರು. ಈ ಸಂದರ್ಭದಲ್ಲಿ ಕೀರ್ತಿರಾಜ ರಾಠೋಡ್, ಮನೋಜ್ ಕಟಗಿ, ಭರಮಪ್ಪ ಹೆಚ್, ಅಭೀಶೇಕ್ ಎನ್, ಜಗನ್ನಾಥ ವೈ ಸೇರಿದಂತೆ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 