ಶಾಸಕಾಂಗ ಸಭೆಯಲ್ಲಿ ಭಾವನೆ ಹಂಚಿಕೊಳ್ಳಲು ಅವಕಾಶ ನೀಡಬೇಕು, ಇಲ್ಲದಿದ್ದರೆ ಸಮಾನ ಮನಸ್ಕರ ಸಭೆ: ಯತ್ನಾಳ
ವಿಜಯಪುರ, ಫೆ.14 ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಶಾಸಕರಿಗೆ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು. ಇಲ್ಲದಿದ್ದರೆ ಸಮಾನ ಮನಸ್ಕ ಶಾಸಕರು ಸಭೆ ಸೇರಿ ಚರ್ಚಿಸುತ್ತೇವೆ. ಎಷ್ಟು ಜನ ಶಾಸಕರು ಸೇರಿ ಚರ್ಚಿಸುತ್ತೇವೆ ಎಂದು ಈಗಲೇ ಹೇಳುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚಿಸಿ ಅನುದಾನ ನೀಡಲು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸುತ್ತೇವೆ. ಉತ್ತರ ಕರ್ನಾಟಕವೆಂದರೆ ಕೇವಲ ಹುಬ್ಬಳ್ಳಿ - ಧಾರವಾಡ ಅಲ್ಲ ಎಂದು ಅವರು ಪರೋಕ್ಷವಾಗಿ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ವಿರುದ್ಧ ವಾಗ್ದಾಳಿ ನಡೆಸಿದರು.ಇನ್ವೆಸ್ಟರ್ ಮೀಟ್ ಅನ್ನು ಹುಬ್ಬಳ್ಳಿ ಬದಲು ಉತ್ತರ ಕರ್ನಾಟಕದ ಬೇರೆ ಜಿಲ್ಲೆಯಲ್ಲಿ ಮಾಡಬಹುದಿತ್ತು. ಬರೀ ಹುಬ್ಬಳ್ಳಿ-ಧಾರವಾಡಕ್ಕೆ ಯೋಜನೆಗಳನ್ನು ತಂದರೆ ಹೇಗೆ?. ಕಲಬುರಗಿ, ವಿಜಯಪುರ, ಬಾಗಲಕೋಟೆಗೂ ಯೋಜನೆ ತರಬೇಕು. ಉತ್ತರ ಕರ್ನಾಟಕಕ್ಕೆ ಹಲವು ಕಚೇರಿಗಳ ಸ್ಥಳಾಂತರ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಶ್ನಿಸಲಾಗುವುದು ಎಂದು ಯತ್ನಾಳ ಹೇಳಿದರು.ಮರಿಯಮ್ಮನಹಳ್ಳಿ ಅಪಘಾತ ಪ್ರಕರಣದಲ್ಲಿ ಸಚಿವ ಆರ್. ಅಶೋಕ ಅವರ ಪುತ್ರನ ವಿರುದ್ಧದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೆಂಜ್ ಬದಲು ಆಡಿ ಕಾರು ಎಂದು ಎಫ್ ಐ ಆರ್ ನಲ್ಲಿ ನಮೂದು ಮಾಡಿರು
ವುದು ದೊಡ್ಡ ತಪ್ಪಲ್ಲ. ಪೊಲೀಸ್ ಸಿಬ್ಬಂದಿ ತಪ್ಪಾಗಿ ಬರೆದಿರಬಹುದು. ಒಂದು ತಪ್ಪು ಶಬ್ದವನ್ನು ಹಿಡಿದು ವಿವಾದ ಮಾಡುವುದು ಸರಿಯಲ್ಲ ಎಂದು ಹೇಳಿದರು.ಪಂಚಮಸಾಲಿ ಸಮಾಜಕ್ಕೆ ಸಚಿವ ಮತ್ತು ಮುಖ್ಯಮಂತ್ರಿ ಸ್ಥಾನ ಬೇಡಿಕೆಯ ಇರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಒಂದೇ ಸಮಾಜದಿಂದ ಮತ ಕೇಳಿ ಆಯ್ಕೆಯಾಗಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಕೂಡಲ ಸಂಗಮ ಸ್ವಾಮೀಜಿಯವರು ಸಮಾಜದ ಪರ ಮಾತಾಡಿರಬಹುದು ಎಂದು ಸ್ಪಷ್ಟನೆ ನೀಡಿದರು.ಆನಂದ ಸಿಂಗ್ ಅವರಿಗೆ ಅರಣ್ಯ ಖಾತೆ ನೀಡಿದ್ದಕ್ಕೆ ಅಪಸ್ವರ ಎದ್ದಿರುವ ಬಗ್ಗೆ ಕೇಳಿದಾಗ, ನಾನು ಯಾವುದರ ಬಗ್ಗೆಯೂ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಪಕ್ಷದ ಹಿರಿಯ ನಾಯಕನಾದರೂ ಪ್ರತಿಕ್ರಿಯೆ ನೀಡುವುದಿಲ್ಲ. ಹಿರಿಯ ನಾಯಕ ಆದರೆ ಎಲ್ಲದರ ಬಗ್ಗೆ ಉತ್ತರ ನೀಡಲು ಆಗುವುದಿಲ್ಲ. ಹಿರಿಯ ನಾಯಕರ ಬಹಳ ಜನ ಮೂಲೆಗುಂಪಾಗಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಪ್ರತಿಕ್ರಿಯಿಸಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 