ಸಿಂಧ್ಯಾ ನಿರ್ಗಮನ ನೋವಿನ ವಿಚಾರ: ಸಚಿನ್ ಪೈಲಟ್ನವದೆಹಲಿ
ಮಾ 12:ಜ್ಯೋತಿರಾದಿತ್ಯ ಸಿಂಧ್ಯಾ ಕಾಂಗ್ರೆಸ್ ತೊರೆದಿರುವುದು ನೋವಿನ ಮತ್ತು ದುರದೃಷ್ಟಕರ ಸಂಗತಿ ಎಂದು ಯುವ ನಾಯಕ, ರಾಜಸ್ಥಾನದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾರ ಪಕ್ಷದಿಂದ ಬೇರೆಯಾಗುವುದನ್ನು ನೋಡುವುದೇ ಬೇಸರದ ವಿಚಾರ, ಪಕ್ಷದೊಳಗೆ ಸಹಭಾಗಿತ್ವದ ವಿಷಯದಲ್ಲಿನ ಸಮಸ್ಯೆ ಶೀಘ್ರವೇ ಬಗೆಹರಿಯಲಿ ಎಂದು ಆಶಿಸುವುದಾಗಿಯೂ ಸಚಿನ್ ಟ್ವೀಟ್ ಮಾಡಿದ್ದಾರೆ.ಮಧ್ಯಪ್ರದೇಶದ ಹಿರಿಯ ನಾಯಕ ದಿಗ್ವಿಜಯ ಸಿಂಗ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಪಶ್ಚಿಮಬಂಗಾಳದ ಕಾಂಗ್ರೆಸ್ ಧುರೀಣ ಅಧೀರ್ ಚೌಧರಿ ಸೇರಿದಂತೆ ಅನೇಕ ನಾಯಕರು ಸಿಂಧಿಯಾ ಅವಕಾಶವಾದಿ ನಡೆಯನ್ನು ಟೀಕಿಸಿದ್ದಾರೆ. ರಾಜಸ್ಥಾನದಲ್ಲಿ ಸಚಿನ್ ಪೈಲಟ್ ಅವರು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಜೊತೆ ಕೆಲವು ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಹೀಗಾಗಿ ಪೈಲಟ್ ಮುಂದಿನ ನಡೆ ನಿಗೂಢವಾಗಿದ್ದು ಎಲ್ಲರ ಗಮನ ಸಚಿನ್ ಅವರ ಮೇಲಿದೆ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 