ಸಿಂಧ್ಯಾ ನಿರ್ಗಮನ ನೋವಿನ ವಿಚಾರ: ಸಚಿನ್ ಪೈಲಟ್ನವದೆಹಲಿ
ಮಾ 12:ಜ್ಯೋತಿರಾದಿತ್ಯ ಸಿಂಧ್ಯಾ ಕಾಂಗ್ರೆಸ್ ತೊರೆದಿರುವುದು ನೋವಿನ ಮತ್ತು ದುರದೃಷ್ಟಕರ ಸಂಗತಿ ಎಂದು ಯುವ ನಾಯಕ, ರಾಜಸ್ಥಾನದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾರ ಪಕ್ಷದಿಂದ ಬೇರೆಯಾಗುವುದನ್ನು ನೋಡುವುದೇ ಬೇಸರದ ವಿಚಾರ, ಪಕ್ಷದೊಳಗೆ ಸಹಭಾಗಿತ್ವದ ವಿಷಯದಲ್ಲಿನ ಸಮಸ್ಯೆ ಶೀಘ್ರವೇ ಬಗೆಹರಿಯಲಿ ಎಂದು ಆಶಿಸುವುದಾಗಿಯೂ ಸಚಿನ್ ಟ್ವೀಟ್ ಮಾಡಿದ್ದಾರೆ.ಮಧ್ಯಪ್ರದೇಶದ ಹಿರಿಯ ನಾಯಕ ದಿಗ್ವಿಜಯ ಸಿಂಗ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಪಶ್ಚಿಮಬಂಗಾಳದ ಕಾಂಗ್ರೆಸ್ ಧುರೀಣ ಅಧೀರ್ ಚೌಧರಿ ಸೇರಿದಂತೆ ಅನೇಕ ನಾಯಕರು ಸಿಂಧಿಯಾ ಅವಕಾಶವಾದಿ ನಡೆಯನ್ನು ಟೀಕಿಸಿದ್ದಾರೆ. ರಾಜಸ್ಥಾನದಲ್ಲಿ ಸಚಿನ್ ಪೈಲಟ್ ಅವರು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಜೊತೆ ಕೆಲವು ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಹೀಗಾಗಿ ಪೈಲಟ್ ಮುಂದಿನ ನಡೆ ನಿಗೂಢವಾಗಿದ್ದು ಎಲ್ಲರ ಗಮನ ಸಚಿನ್ ಅವರ ಮೇಲಿದೆ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 