ತಮಿಳುನಾಡಿನಲ್ಲಿ ಎರಡು ಓಮ್ನಿ ಬಸ್ಗಳ ಡಿಕ್ಕಿ: ನೇಪಾಳದ ಆರು ಪ್ರವಾಸಿಗರು ಸಾವು, 28 ಮಂದಿಗೆ ಗಾಯ
ಸೇಲಂ, ಫೆ 20, ತಮಿಳುನಾಡಿನ ಈ ಜಿಲ್ಲೆಯ ಒಮಲೂರು ಬಳಿಯ ನಾರಿಪಲ್ಲಂನಲ್ಲಿ ಬುಧವಾರ ಮಧ್ಯರಾತ್ರಿ ಎರಡು ಓಮ್ನಿ ಬಸ್ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ನೇಪಾಳದ ಆರು ಪ್ರವಾಸಿಗರು ಮೃತಪಟ್ಟಿದ್ದು, ಇತರ 28 ಮಂದಿ ಗಾಯಗೊಂಡಿದ್ದಾರೆ. ಕಠ್ಮಂಡುವಿನಿಂದ 34 ಪ್ರವಾಸಿಗರ ತಂಡ ಕನ್ಯಾಕುಮಾರಿಗೆ ಭೇಟಿ ನೀಡಿದ ನಂತರ ಓಮ್ನಿ ಬಸ್ನಲ್ಲಿ ರಾಜಸ್ಥಾನಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೇಪಾಳ ಪ್ರವಾಸಿಗರು ರಾತ್ರಿಯಿಡೀ ದೇವಾಲಯದ ಹಾಲ್ ನಲ್ಲಿ ವಿಶ್ರಾಂತಿ ಪಡೆದು ಗುರುವಾರ ಬೆಳಿಗ್ಗೆ ಪ್ರಯಾಣ ಮುಂದುವರಿಸಲು ನಿರ್ಧರಿಸಿದ್ದರು. ನೇಪಾಳದ ಪ್ರವಾಸಿಗರಿದ್ದ ಓಮ್ನಿ ಬಸ್ನ ಚಾಲಕ ಮತ್ತೊಂದು ಓಮ್ನಿ ಬಸ್ ಲೇನ್ನಲ್ಲಿ ಸಮೀಪಿಸುತ್ತಿರುವುದನ್ನು ಗಮನಿಸದೆ ರಸ್ತೆಯ ಇನ್ನೊಂದು ಲೇನ್ಗೆ ವಾಹನವನ್ನು ತಿರುಗಿಸಿದಾಗ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಬೆಂಗಳೂರಿನಿಂದ ತಿರುವನಂತಪುರಂಗೆ ತೆರಳುತ್ತಿದ್ದ ಮತ್ತೊಂದು ಓಮ್ನಿ ಬಸ್ ಗೆ ನೇಪಾಳದ ಪ್ರವಾಸಿ ಓಮ್ನಿ ಬಸ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಹಿಳೆ ಸೇರಿದಂತೆ ಆರು ನೇಪಾಳ ಪ್ರಜೆಗಳು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 