ಕಂಬಳ ವೀರ ಶ್ರೀನಿವಾಸಗೌಡಗೆ ಎಲ್ಲ ಅಗತ್ಯ ತರಬೇತಿ: ಸಿ.ಟಿ.ರವಿ
ಬೆಂಗಳೂರು,ಫೆ. 17, ಕಂಬಳ ವೀರ ಶ್ರೀನಿವಾಸಗೌಡ ಅವರನ್ನು ಕರೆದಿದ್ದು, ಅವರಿಗೆ ಅಗತ್ಯವಾದ ಎಲ್ಲಾ ತರಬೇತಿ ಕೊಡುತ್ತೇವೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀನಿವಾಸಗೌಡ ಅವರು ಫ್ರೀ ಕ್ವಾಲಿಫಿಕೇಶನ್ ನಲ್ಲಿ ಪಾಸ್ ಆದಲ್ಲಿ ತರಬೇತಿ ನೀಡುತ್ತೇವೆ ಎಂದರು.ಕಾಂಗ್ರೆಸ್ನ ನಿಜ ಬಣ್ಣ ಬಯಲಾಗಿದೆ. ಹುಬ್ಬಳ್ಳಿ, ಶಾಹೀನ್ ಶಾಲೆ ವಿಚಾರದಲ್ಲಿ ದ್ವಂದ್ವ ನಿಲುವು ಹೊಂದಿದೆ. ದೇಶದ್ರೋಹಿಗಳೊಂದಿಗೆ ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ.
ಇಲ್ಲಿ ಇದ್ದು ಪಾಕ್ ಪರ ಘೋಷಣೆ ಕೂಗುವುದು ಸರಿಯಲ್ಲ.ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹಸಚಿವರಿಗೆ ಒತ್ತಾಯಿಸುವುದಾಗಿ ಹೇಳಿದರು.ಹುಬ್ಬಳ್ಳಿಯಲ್ಲಿ ದೇಶದ್ರೋಹ ಎಸಗಿದವರಿಗೂ ಕಠಿಣ ಕ್ರಮ ಜರುಗಿಸಬೇಕು. ಸಿಎಎ ವಿರೋಧವಾಗಿ ಶಾಹಿನ್ ಶಾಲೆಯಲ್ಲಿ ಮಕ್ಕಳ ಮೂಲಕ ನಾಟಕ ಮಾಡಿಸಿದ್ದಾರೆ. ಸಿಎಎ ಯಿಂದ ಯಾರಿಗೂ ತೊಂದರೆಯಾಗಿಲ್ಲ. ಸಿಎಎಯಿಂದ ಯಾರ ಹಕ್ಕು ಕಿತ್ತುಕೊಂಡಿದೆ. ಸಂವಿಧಾನ ವಿರೋಧಿ ಎಂದು ಹೇಳಿದ್ದಾರೆ. ಭಾರತೀಯ ಪ್ರಜೆಗಳಿಗೆ ತಾರತಮ್ಯ ಮಾಡಿಲ್ಲ. ಕಾಂಗ್ರೆಸ್ ನವರು ಮಾಡುತ್ತಿರುವುದು ಆರೋಪವಷ್ಟೇ ಎಂದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 