ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿ : ನಗುಮುಖದಿಂದ ಹೊರ ಬಂದ ವಿದ್ಯಾರ್ಥಿಗಳು
SSLC exam successful: Students emerge with smiles on their faces
ಲೋಕದರ್ಶನ ವರದಿ
ಕಂಪ್ಲಿ 32: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಗುರುವಾರ ಯಶಸ್ವಿಯಾಗಿ ಮುಗಿದಿದ್ದು, ಶಿಕ್ಷಣ ಇಲಾಖೆ ಸೇರಿದಂತೆ ಅಧಿಕಾರಿಗಳು ಹಾಗೂ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ತಾಲೂಕಿನ ಸುಗ್ಗೇನಹಳ್ಳಿ ಗ್ರಾಮದ ವಿದ್ಯಾಭಾರತಿ ಪರೀಕ್ಷಾ ಕೇಂದ್ರದಲ್ಲಿ ಮುಖ್ಯಅಧೀಕ್ಷಕ ನಂದ ಕಿಶೋರ್ ನೇತೃತ್ವದಲ್ಲಿ ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆದವು. ಕೊನೆಯ ಪರೀಕ್ಷೆಯನ್ನು ಬರೆದು ಮುಗಿಸಿ ಪರೀಕ್ಷಾ ಕೇಂದ್ರದಿಂದ ಹೊರಗಡೆ ಬರುವಾಗ ಎಲ್ಲ ವಿದ್ಯಾರ್ಥಿಗಳ ಮುಖದಲ್ಲಿ ನಗುಮುಖ ಕಂಡು ಬಂತು. ಸರ್ಕಾರದ ಸೂಚನೆಯಿಂದ ಜಿಲ್ಲಾಡಳಿತ ಆದೇಶದಂತೆ ತಾಲೂಕು ಮಟ್ಟದ ಪರೀಕ್ಷೆಗೆ ಎಲ್ಲ ಸಿದ್ಧತೆಗಳನ್ನು ನಡೆಸಿತ್ತು. ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಿದ್ದು, ಪರೀಕ್ಷೆ ಅಡೆತಡೆ ಇಲ್ಲದೆ ಮುಕ್ತಾಯವಾಗಲು ನೆರವಾಯಿತು.ಮೊದಲನೆಯ ದಿನ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಭಯವಿತ್ತು.
ಎಚ್ಚರಿಕೆವಹಿಸಿ ಪರೀಕ್ಷೆ ಎದುರಿಸಿದ್ದೇವೆ. ಚೆನ್ನಾಗಿ ಬರೆದಿದ್ದೇವೆ’. ಉತ್ತಮ ಫಲಿತಾಂಶ ಬರುವ ನೀರೀಕ್ಷೆ ಇದೆ ಎಂದು ವಿದ್ಯಾಭಾರತಿ ಶಾಲೆಯ ವಿದ್ಯಾರ್ಥಿನಿ ನೂರ್ ಎ ತಸ್ಲೀಂ ಹೇಳಿದರು. ಕೊನೆಯ ಪರೀಕ್ಷೆಗೆ ಶೇ.97 ಮಕ್ಕಳು ಹಾಜರು : ಪಟ್ಟಣದಲ್ಲಿ ತಾಲೂಕಿನ ಆರು ಪರೀಕ್ಷಾ ಕೇಂದ್ರದಲ್ಲಿ ನಡೆದ ಕೊನೆಯ ಪರೀಕ್ಷೆಗೆ ಶೇ.97ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಕೊನೆಯ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗೆ ಒಟ್ಟು 1923 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 1868 ಮಂದಿ ಹಾಜರಾಗಿದ್ದಾರೆ. 55 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಶಾಂತಿಯುತವಾಗಿ ನಡೆದವು ಸುಗ್ಗೇನಹಳ್ಳಿಯ ವಿದ್ಯಾಭಾರತಿ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ 327 ವಿದ್ಯಾರ್ಥಿಗಳು ಹಾಜರಾಗಿದ್ದು, 20 ವಿದ್ಯಾರ್ಥಿಗಳು ಗೈರಾದರು. ಷಾಮಿಯಾಚಂದ್ ಬಾಲಕರ ಪ್ರೌಢಶಾಲಾ ಕೇಂದ್ರದಲ್ಲಿ 254 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ 316 ವಿದ್ಯಾರ್ಥಿಗಳು, ಓದ್ಸೋ ಜಡೆಮ್ಮ ಪ್ರೌಢಶಾಲೆಯಲ್ಲಿ 358 ವಿದ್ಯಾರ್ಥಿಗಳು, ವಿಜಯನಗರ ಪ್ರೌಢಶಾಲೆಯಲ್ಲಿ 353 ವಿದ್ಯಾರ್ಥಿಗಳು, ಎಮ್ಮಿಗನೂರು ಶಾಲೆಯಲ್ಲಿ 260 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 