ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳ ನೀಡಲು ಸಕರ್ಾರ ಚಿಂತನೆ
ಬೆಂಗಳೂರು: ಹೆಚ್ಚುತ್ತಿರುವ ಮಾಲಿನ್ಯ ತಡೆಯಲು ಮುಂದಾಗಿರುವ ಸಕರ್ಾರ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ನೀಡಲು ಚಿಂತನೆ ನಡೆಸುತ್ತಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳ ನೀಡುವಿಕೆ ಕುರಿತಂತೆ ನಿನ್ನೆಯಷ್ಟೇ ಸಕರ್ಾರದ ಮುಖ್ಯ ಕಾರ್ಯದಶರ್ಿ ಟಿ.ಎಂ.ವಿಜಯಭಾಸ್ಕರ್ ಅವರು ಸಭೆ ನಡೆಸಿದ್ದು, ಸಭೆಯಲ್ಲಿ ಸಕರ್ಾರಿ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳ ನೀಡುವಿಕೆ ಕುರಿತಂತೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.
ಮಾಲಿನ್ಯವನ್ನು ಗಮನದಲ್ಲಿಟ್ಟುಕೊಕಂಡು ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳಿಗೆ ಬದಲಾಗಿ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ನೀಡಲು ನಿರ್ಧರಿಸಲಾಗಿದೆ ಎಂದು ಸಭೆಯಲ್ಲಿ ವಿಜಯ ಭಾಸ್ಕರ್ ಅವರು ತಿಳಿಸಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿ, ಎಲೆಕ್ಟ್ರಿಕ್ ವಾಹನಗಳಿಂದ ಎದುರಾಗುವ ಸಾಧಕ ಹಾಗೂ ಬಾಧಕಗಳ ಕುರಿತಂತೆ ಅಧ್ಯಯನ ನಡೆಸುವಂತೆಯೂ ಸಕರ್ಾರ ಸೂಚಿಸಿದೆ.
ಇದಲ್ಲದೆ ಸಕರ್ಾರಿ ಇಲಾಖೆಗಳಲ್ಲಿ ವಾಹನಗಳ ಹೊರಗುತ್ತಿಗೆ ಸೇವೆಗಳನ್ನೂ ರದ್ದುಗೊಳಿಸಲು ಸಕರ್ಾರ ಚಿಂತನೆ ನಡೆಸಿದೆ. ಹೊರಗುತ್ತಿಗೆ ವಾಹನಗಳ ಬದಲಾಗಿ ನಗರದಲ್ಲೇ ಇರುವ ಖಾಸಗಿ ಕ್ಯಾಬ್ ಸೇವೆಗಳನ್ನು ಬಳಕೆ ಮಾಡುವಂತೆ ತಿಳಿಸಿದೆ. ಇದರಿಂದ ಇಲಾಖೆಗೆ ಎದುರಾಗುತ್ತಿರುವ ಹೆಚ್ಚುವರಿ ಹೊರೆ ಕಡಿಮೆಯಾಗಲಿದೆ ಎಂದು ತಿಳಿಸಿದೆ ಎಂದು
ಹೇಳಿದ್ದಾರೆ.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 