ಪಿಡಿಐಟಿಯಲ್ಲಿ ಸದ್ಭಾವನಾ ದಿನಾಚರಣೆ
ಲೋಕದರ್ಶನ ವರದಿ
ಹೊಸಪೇಟೆ23: ``ಜಾತ್ಯಾತೀತತೆಯ ಅಂಶ ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯಲ್ಲಿ ಮೊದಲಿನಿಂದಲೂ ಅಂತರ್ಗತವಾಗಿ ಬಂದಿದೆ, ಜಾತ್ಯಾತೀತತೆ ಭಾರತೀಯ ಹೆಗ್ಗುರುತು'' ಎಂದು ಹೊಸಪೇಟೆಯ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ ಎಸ್.ಎಂ.ಶಶಿಧರ್ ತಿಳಿಸಿದರು.
ಹೊಸಪೇಟೆಯ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಆಯೋಜಿಸಲಾಗಿದ್ದ ಸದ್ಭಾವನಾ ದಿನಾಚರಣೆ ಸಂದರ್ಭದ ಅಧ್ಯಕ್ಷತೆ ವಹಿಸಿ ವಿದ್ಯಾಥರ್ಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡುತ್ತಿದ್ದರು.
ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 72ನೇ ಜನ್ಮ ಜಯಂತಿಯನ್ನು ಸದ್ಭಾವನಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಜಾತಿ, ಧರ್ಮ, ಪ್ರದೇಶ, ಮತ, ಭಾಷೆಯ ಮೊದಲಾದ ಯಾವುದೇ ಭೇದ ಭಾವವಿಲ್ಲದೆ ಭಾರತದ ಎಲ್ಲಾ ಜನತೆಯು ಭಾವೈಕ್ಯ ಮತ್ತು ಸೌಹಾರ್ದತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ವೈಯಕ್ತಿಕವಾಗಿಯಾಗಲಿ, ಸಾಮೂಹಿಕವಾಗಿಯಾಗಲಿ ಸಮಾಜದಲ್ಲಿರುವ ಬೇಧಭಾವಗಳು, ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕವಾಗಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಮುಂದಾಗಬೇಕು ಎಂದು ಅವರು ಪ್ರತಿಜ್ಞೆ ಬೋಧಿಸಿದರು.
ಎನ್.ಎಸ್.ಎಸ್. ಘಟಕದ ಸಂಚಾಲಕರಾದ ಆರ್. ನವೀನ, ಹಿರಿಯ ಅಧ್ಯಾಪಕರಾದ ಪ್ರತಾಪ್ ಕುಲಕಣರ್ಿ, ಡಾ. ಶಿವಕೇಶವ ಕುಮಾರ್, ಚಕ್ರಸಾಲಿ ಮುಂತಾದವರು ಉಪಸ್ಥಿತರಿದ್ದರು. 100ಕ್ಕೂ ಹೆಚ್ಚು ವಿದ್ಯಾಥರ್ಿಗಳು ಈ ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 