ದೆಹಲಿ ವಿರುದ್ಧದ ರಣಜಿ ಪಂದ್ಯ ಆಡದಂತೆ ಸಹಾಗೆ ಸೂಚನೆ
ನವದೆಹಲಿ, ಜ.22 : ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ವೃದ್ಧಿಮನ್ ಸಹಾ ಅವರಿಗೆ ದೆಹಲಿ ವಿರುದ್ಧ ಈಡನ್ ಗಾರ್ಡನ್ ನಲ್ಲಿ ನಡೆಯಲಿರುವ ರಣಜಿ ಟೂರ್ನಿಯ ಪಂದ್ಯದಲ್ಲಿ ಆಡದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ತಿಳಿಸಿದೆ.
ಕಳೆದ ವರ್ಷ ಬಾಂಗ್ಲಾ ವಿರುದ್ಧ ನಡೆದಿದ್ದ ಹಗಲು ರಾತ್ರಿ ಟೆಸ್ಟ್ ವೇಳೆ ಸಹಾ ಅವರು ಗಾಯಕ್ಕೆ ತುತ್ತಾಗಿದ್ದರು. ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಪಶ್ಚಿಮ ಬಂಗಾಳ ತಂಡ ಮಂಗಳವಾರ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ 303 ರನ್ ಗಳ ಜಯ ಸಾಧಿಸಿತ್ತು.
“ಭಾನುವಾರದಿಂದ ಆರಂಭವಾಗಲಿರುವ ರಣಜಿ ಪಂದ್ಯಕ್ಕೆ ಸಹಾ ಅಲಭ್ಯರಾಗಲಿದ್ದಾರೆ. ನನಗೆ ಅನಿಸಿದಂತೆ ಬಿಸಿಸಿಐ ಈ ಪಂದ್ಯ ಆಡದಿರಲು ಸೂಚಿಸಿದೆ. ಸಹಾ ಅವರಿಗೆ ಇದು ಉತ್ತಮ ಅವಕಾಶ. ಇವರ ಅನುಪಸ್ಥಿತಿ ತಂಡಕ್ಕೆ ಕಾಡುವುದಿಲ್ಲ” ಎಂದು ಬಂಗಾಳ ಕೋಚ್ ಅರುಣ್ ಲಾಲ್ ತಿಳಿಸಿದ್ದಾರೆ.
ಭಾರತ, ನ್ಯೂಜಿಲೆಂಡ್ ಪ್ರವಾಸದಲ್ಲಿ ಎರಡು ಟೆಸ್ಟ್ ಪಂದ್ಯ ಆಡಲಿದೆ. ಭಾರತ ತಂಡದ ವೇಗದ ಬೌಲರ್ ಇಶಾಂತ್ ಶರ್ಮಾ ಗಾಯಕ್ಕೆ ತುತ್ತಾಗಿದ್ದರಿಂದ ನ್ಯೂಜಿಲೆಂಡ್ ಪ್ರವಾಸಕ್ಕೆ ಅಲಭ್ಯರಾಗಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 