ದೆಹಲಿ ವಿರುದ್ಧದ ರಣಜಿ ಪಂದ್ಯ ಆಡದಂತೆ ಸಹಾಗೆ ಸೂಚನೆ
ನವದೆಹಲಿ, ಜ.22 : ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ವೃದ್ಧಿಮನ್ ಸಹಾ ಅವರಿಗೆ ದೆಹಲಿ ವಿರುದ್ಧ ಈಡನ್ ಗಾರ್ಡನ್ ನಲ್ಲಿ ನಡೆಯಲಿರುವ ರಣಜಿ ಟೂರ್ನಿಯ ಪಂದ್ಯದಲ್ಲಿ ಆಡದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ತಿಳಿಸಿದೆ.
ಕಳೆದ ವರ್ಷ ಬಾಂಗ್ಲಾ ವಿರುದ್ಧ ನಡೆದಿದ್ದ ಹಗಲು ರಾತ್ರಿ ಟೆಸ್ಟ್ ವೇಳೆ ಸಹಾ ಅವರು ಗಾಯಕ್ಕೆ ತುತ್ತಾಗಿದ್ದರು. ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಪಶ್ಚಿಮ ಬಂಗಾಳ ತಂಡ ಮಂಗಳವಾರ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ 303 ರನ್ ಗಳ ಜಯ ಸಾಧಿಸಿತ್ತು.
“ಭಾನುವಾರದಿಂದ ಆರಂಭವಾಗಲಿರುವ ರಣಜಿ ಪಂದ್ಯಕ್ಕೆ ಸಹಾ ಅಲಭ್ಯರಾಗಲಿದ್ದಾರೆ. ನನಗೆ ಅನಿಸಿದಂತೆ ಬಿಸಿಸಿಐ ಈ ಪಂದ್ಯ ಆಡದಿರಲು ಸೂಚಿಸಿದೆ. ಸಹಾ ಅವರಿಗೆ ಇದು ಉತ್ತಮ ಅವಕಾಶ. ಇವರ ಅನುಪಸ್ಥಿತಿ ತಂಡಕ್ಕೆ ಕಾಡುವುದಿಲ್ಲ” ಎಂದು ಬಂಗಾಳ ಕೋಚ್ ಅರುಣ್ ಲಾಲ್ ತಿಳಿಸಿದ್ದಾರೆ.
ಭಾರತ, ನ್ಯೂಜಿಲೆಂಡ್ ಪ್ರವಾಸದಲ್ಲಿ ಎರಡು ಟೆಸ್ಟ್ ಪಂದ್ಯ ಆಡಲಿದೆ. ಭಾರತ ತಂಡದ ವೇಗದ ಬೌಲರ್ ಇಶಾಂತ್ ಶರ್ಮಾ ಗಾಯಕ್ಕೆ ತುತ್ತಾಗಿದ್ದರಿಂದ ನ್ಯೂಜಿಲೆಂಡ್ ಪ್ರವಾಸಕ್ಕೆ ಅಲಭ್ಯರಾಗಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 