ಶೋಷಿತರಿಗೆ ದೇವರನ್ನು ಕಾಣಿಸಿದ ಸಂತಶ್ರೇಷ್ಠ ನಾರಾಯಣ ಗುರುಗಳು
Saint Narayana Guru laid great emphasis on education
ಹೂವಿನಹಡಗಲಿ 9: ಸಂತ. ಶ್ರೇಷ್ಠ ನಾರಾಯಣ ಗುರುಗಳು ಕೇರಳದಲ್ಲಿ ಸಮಾಜ ಸುಧಾರಣೆಗೆ ಶಿಕ್ಷಣ ಕ್ಕೆ ಹೆಚ್ಚು ಒತ್ತು ಕೊಟ್ಟಿದ್ದರು ಎಂದು ಶಾಸಕ ಕೃಷ್ಣ ನಾಯಕ ಹೇಳಿದರು.
ಪಟ್ಟಣದಲ್ಲಿ ತಾ.ಪಂ.ರಾಜೀವ್ ಗಾಂಧಿ ಸಭಾಂಗಣದಲ್ಲಿ ಮಂಗಳವಾರ ಈಡಿಗರ ಸಮಾಜದಿಂದ ದಿಂದ ಸಂತ ಶ್ರೇಷ್ಠ ಬ್ರಹ್ಮ ನಾರಾಯಣ ಗುರುಗಳು ಜಯಂತಿ ಕಾರ್ಯ ಕ್ರಮ ಉದ್ಘಾಟಿಸಿ ಮಾತನಾಡಿ ಒಂದೇ ಜಾತಿ, ಒಂದೇ ಮತ, ಒಂದೇ ದೇವರು’ ಎಂದು ಇಡೀ ಮನುಕುಲಕ್ಕೇ ಸಾರಿದವರು ಸಂತಶ್ರೇಷ್ಠ ನಾರಾಯಣಗುರುಗಳು. ಇಂದಿನ ಸಮಾಜದಲ್ಲಿ ಧರ್ಮದ ಹೆಸರಿನಲ್ಲಿ ಜಾತೀಯ ವಿಷ ಭಾವನೆಗಳನ್ನು ಬಿತ್ತಿ, ’ನಮ್ಮ ಧರ್ಮ’, ’ನಮ್ಮ ಸಿದ್ಧಾಂತ’ ಎನ್ನುತ್ತಾ ಮತಭ್ರಾಂತಿಯಿಂದ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದಾರೆ. ಇಂಥಹ ಸಂದರ್ಭದಲ್ಲಿ ನಾರಾಯಣಗುರುಗಳ ಸಂದೇಶವು ಅತ್ಯಂತ ಪ್ರಸ್ತುತವಾಗಿದೆ ಎಂದರು.
ಉಪನ್ಯಾಸ ಕ ಈಡಿಗರ ಅಶೋಕ ಉಪನ್ಯಾಸ. ನೀಡಿದರು. ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ.ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಐಗೋಳ ಚಿದಾನಂದ ಮಾತನಾಡಿದರು. ಈಡಿಗರ ಸಮಾಜದ ತಾಲೂಕು ಅದ್ಯಕ್ಷ ಮಾರುತಿ ಕೃಷ್ಣ ಪ್ಪ. ಮಹಿಳಾ ಅದ್ಯಕ್ಷೆ ತಾರಾಮತಿ. ಬಿ.ಜಯಲಕ್ಷ್ಮಿ.ಪುರಸಭೆ ಅದ್ಯಕ್ಷೆ ಜಮಾಲಾ ಬಿ. ಉಪಾಧ್ಯಕ್ಷ ಸೊಪ್ಪಿನ ಮಂಜುನಾಥ ಈಡಿಗರ. ಸಮಾಜದ ಜಿಲ್ಲಾ ಉಪಾಧ್ಯಕ್ಷ ಕೆ.ಅಯ್ಯನಗೌಡ.ತಾ.ಪಂ.ಇಒ ಪರಮೇಶಪ್ಪ.ಮುಖಂಡ ಗುರುಮೂರ್ತಿ. ಬಿಜೆಪಿ ಅದ್ಯಕ್ಷ ಮಲ್ಲಿಕಾರ್ಜುನ. ಈಟಿ.ಲಿಂಗರಾಜ.ಹೆಚ್.ಪೂಜಪ್ಪ ಇದ್ದರು. ಇದಕ್ಕೂ ಮೊದಲು ಬ್ರಹ್ಮ ನಾರಾಯಣ ಗುರುಗಳ ಭಾವಚಿತ್ರ ಮೆರವಣಿಗೆ ನಡೆಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 