ಉಪ್ಪಿನಂಗಡಿ : ಗ್ಯಾಸ್ ಟ್ಯಾಂಕರ್ ಪಲ್ಟಿ; ಅನಿಲ ಸೋರಿಕೆ
ಮಂಗಳೂರು , ಮಾ 28, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಡಿ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ತಿರುವಿನಲ್ಲಿ ಅನಿಲ ಸಾಗಿಸುವ ಬುಲೆಟ್ ಟ್ಯಾಂಕರೊಂದು ಶನಿವಾರ ಮುಂಜಾನೆ ಪಲ್ಟಿಯಾಗಿದೆ. ಈ ವೇಳೆ ಟ್ಯಾಂಕರ್ ಹಾನಿಗೀಡಾಗಿದ್ದು, ಅನಿಲ ಸೋರಿಕೆಯಾಗಿದೆ. ಶನಿವಾರ ಮುಂಜಾನೆ ಬೆದ್ರೋಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಮಗುಚಿ ರಸ್ತೆ ಬದಿಗೆ ಬಿದ್ದಿದೆ. ಈ ವೇಳೆ ಚಾಲಕ ಅಪಾಯದಿಂದ ಪಾರಾಗಿದ್ದು, ಅನಿಲ ಸೋರಿಕೆ ಉಂಟಾಗಿದೆ. ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾರ್ಯಚರಣೆ ನಡೆಸಲಾಯಿತು.ಘಟನೆಯ ಹಿನ್ನೆಲೆಯಲ್ಲಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಯಿತು. ಇಂದು ದ.ಕ . ಜಿಲ್ಲೆಯಲ್ಲಿ ಪೂರ್ಣ ಬಂದ್ ಇದ್ದ ಕಾರಣ ರಸ್ತೆಯಲ್ಲಿ ವಾಹನ ಸಂಚಾರ ಕನಿಷ್ಠ ಪ್ರಮಾಣದಲ್ಲಿತ್ತು. ಸ್ಥಳಕ್ಕೆ ಎಚ್.ಪಿ. ತುರ್ತು ನಿರ್ವಹಣಾ ದಳ, ಅಗ್ನಿಶಾಮಕ ದಳ, ಹಾಗೂ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ, ಅನಿಲ ಸೋರಿಕೆ ತಡೆಗಟ್ಟುವ ಕಾರ್ಯಚರಣೆ ನಡೆಸಿದರು.
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ 