ಸಂಭಾಜಿರಾವ್ ಭಿಡೆ ಜಿಲ್ಲಾ ಪ್ರವೇಶಕ್ಕೆ ನಿಷೇಧ
ಬೆಳಗಾವಿ 19: ಕಾರ್ಯಕ್ರಮಗಳಲ್ಲಿ ಪ್ರಚೋದನಾತ್ಮಕ ಭಾಷಣ ಮಾಡುವ ಆರೋಪದ ಹಿನ್ನೆಲೆ ಮಹಾರಾಷ್ಟ್ರದ ಮುಖಂಡ ಸಂಭಾಜಿರಾವ್ ಭಿಡೆಗೆ ಕನರ್ಾಟಕ, ಜಿಲ್ಲೆಯಲ್ಲಿ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಎಸ್. ಜಿಯಾವುಲ್ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ಬೆಳಗಾವಿ ಜಿಲ್ಲಾಧಿಕಾರಿಗಳು ಇದೇ ತಿಂಗಳು 21ರ ಮಧ್ಯರಾತ್ರಿ 12 ಗಂಟೆಯಿಂದ 11 ದಿನಗಳ ಕಾಲ ಜಿಲ್ಲೆ ಪ್ರವೇಶಕ್ಕೆ ನಿಷೇಧ ಮಾಡಿದ್ದಾರೆ. ಜುಲೈ 31ರ ಮಧ್ಯಾಹ್ನ 12 ಗಂಟೆಯವರೆಗೂ ಮಹಾರಾಷ್ಟ್ರದ ಮುಖಂಡ ಸಂಭಾಜಿರಾವ್ ಭಿಡೆಗೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣಕ್ಕೆ ಆಗಮಿಸಲಿದ್ದ ಸಂಭಾಜಿರಾವ್ ಭಿಡೆ ಅವರು ಶಿವ ಪ್ರತಿಷ್ಠಾನ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದರು. ಮಹಾರಾಷ್ಟ್ರದಲ್ಲಿ ಭೀಮಾ ಕೋರೆಗಾಂವ ಗಲಭೆಗೆ ಬಿಡೆ ಪ್ರಚೋದನಕಾರಿ ಭಾಷಣವೇ ಕಾರಣವಾಗಿತ್ತು ಎನ್ನಲಾಗುತ್ತಿದೆ. ಸಂಭಾಜಿರಾವ್ಗೆ ಆಹ್ವಾನಿಸಿದ್ದ ಸಂಕೇಶ್ವರದ ಶ್ರೀ ಶಿವಪ್ರತಿಷ್ಠಾನ ಹಿಂದೂಸ್ತಾನ್ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದ ಸಂಭಾಜಿರಾವ್ ಬಿಡೆ 'ದಿ ಹಿಸ್ಟರಿ ಆಫ್ ರಾಯಘಡ ಸುವರ್ಣ ಸಿಂಹಾಸನ' ವಿಷಯದ ಕುರಿತು ಉಪನ್ಯಾಸ ನೀಡಲಿದ್ದರು. ಸಂಭಾಜಿರಾವ್ ಪ್ರಚೋದನಕಾರಿ ಭಾಷಣದಿಂದ ಸಮಾಜದ ಶಾಂತಿ ಕಡದಬಾರದು ಮತ್ತು ಯಾವುದೇ ಜನಾಂಗದ ಭಾವನೆಗೆ ಧಕ್ಕೆ ಆಗಬಾರದೆಂದು ಮುಂಜಾಗೃತ ಕ್ರಮವಾಗಿ ಕನರ್ಾಟಕ ಪ್ರವೇಶ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಹೊರಡಿಸಿರುವ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 